ದಕ್ಷಿಣ ಭಾರತದ ಸುಪ್ರಸಿದ್ಧ ಚಲನಚಿತ್ರ ನಿರ್ದೇಶಕ ಮಣಿರತ್ನಂ ಅವರು ಉಸಿರಾಟದ ತೊಂದರೆ ಎದುರಿಸುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟದ ತೊಂದರೆ ಹಾಗೂ ತಲೆಸುತ್ತು ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಮಂಗಳವಾರ ರಾತ್ರಿ ಅವರನ್ನು ಇಲ್ಲಿನ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದ್ದು, ಹೃದ್ರೋಗ ತಜ್ಞರೂ ಸೇರಿದಂತೆ ಪರಿಣಿತ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಅವರ ದೇಹಸ್ಥಿತಿ ಸ್ಥಿರವಾಗಿದ್ದರೂ ಅವರು ಕೆಲಕಾಲ ಆಸ್ಪತ್ರೆಯಲ್ಲಿರಬೇಕಾದೀದು ಎಂದು ಮೂಲಗಳು ತಿಳಿಸಿವೆ.
ಮಣಿರತ್ನಂ ಅವರು ಪ್ರಸ್ತುತ ವಿಕ್ರಂ, ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ತಾರಾಂಗಣಗದ ಚಿತ್ರ ಒಂದರ ನಿರ್ದೇಶನ ಮಾಡುತ್ತಿದ್ದಾರೆ.
52ರ ಹರೆಯದ ಮಣಿರತ್ನಂ ಅವರು ಈ ಹಿಂದೆ 2004ರಲ್ಲಿ ಯುವ ಚಿತ್ರ ನಿರ್ಮಾಣದ ವೇಳೆ ಹೃದಯಾಘಾತಕ್ಕೊಳಗಾಗಿದ್ದರು. |