ಐದು ಸುತ್ತಿನ ಸುದೀರ್ಘ ಪ್ರಜಾಸತ್ತಾತ್ಮಕ ಪ್ರಕ್ರಿಯೆ ಮತದಾನ ಮುಗಿಯುವ ಮುನ್ನವೇ ತೃತೀಯ ರಂಗಕ್ಕೊಂದು ಶಾಕ್. ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡನೂ ಆಗಿರುವ ಎಚ್.ಡಿ.ಕುಮಾರಸ್ವಾಮಿ ಅವರು ಮಂಗಳವಾರ ರಾತ್ರಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಮನೆಗೆ ಮುಖಮುಚ್ಚಿಕೊಂಡು ಭೇಟಿ ನೀಡಿರುವುದು ತೃತೀಯ ರಂಗವನ್ನು ತಲ್ಲಣಗೊಳಿಸಿದ್ದರೆ, ಆ ಬಳಿಕ ದಿಢೀರ್ ಪತ್ರಿಕಾಗೋಷ್ಠಿ ಕರೆಯಬೇಕಾದ ಅನಿವಾರ್ಯತೆಯಲ್ಲಿ ಸಿಲುಕಿದ ಕುಮಾರಸ್ವಾಮಿ ಪತ್ರಕರ್ತರ ಪ್ರಶ್ನೆಯ ಬಾಣಗಳಿಗೆ ಉತ್ತರಿಸಲು ತಡಕಾಡುತ್ತಿದ್ದುದು ಸ್ಪಷ್ಟವಾಗಿತ್ತು.ತೃತೀಯ ರಂಗದಲ್ಲಿ ತೆಲಂಗಾಣ ರಾಷ್ಟ್ರ