ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಬಿಹಾರ ಎಂಜಿನಿಯರ್ ಸಾವು ಆತ್ಮಹತ್ಯೆಯೋ, ಕೊಲೆಯೊ?
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಹಾರ ಎಂಜಿನಿಯರ್ ಸಾವು ಆತ್ಮಹತ್ಯೆಯೋ, ಕೊಲೆಯೊ?
ಬಿಹಾರದ ಎಕ್ಸಿಕ್ಯೂಟಿವ್ ಎಂಜಿನಿಯರ್ ಹತ್ಯೆ ಆರೋಪಕ್ಕೆ ಸಂಬಂಧಪಟ್ಟಂತೆ ಸಿಬಿಐ ತನಿಖೆಗೆ ಶಿಫಾರಸು ಮಾಡುವಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಗೃಹ ಇಲಾಖೆಗೆ ಆದೇಶಿಸಿದ್ದಾರೆ. ಎಂಜಿನಿಯರ್ ಹತ್ಯೆ ಆರೋಪ ಕುರಿತು ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಸುಮಾರು 20,000 ಎಂಜಿನಿಯರ್‌ಗಳು ಮುಷ್ಕರ ಹಮ್ಮಿಕೊಂಡಿದ್ದಾರೆ.

ಸಿಬಿಐ ಹತ್ಯೆ ಪ್ರಕರಣ ಕುರಿತು ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಬೇಕೆಂಬ ಗೃಹಇಲಾಖೆಯ ಪ್ರಸ್ತಾವನೆಗೆ ನಿತೀಶ್ ಕುಮಾರ್ ಸಮ್ಮತಿಯ ಮುದ್ರೆ ಒತ್ತಿದ್ದಾರೆಂದು ರಾಜ್ಯ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ.ಕಲೆಕ್ಟೋರೇಟ್ ಕಟ್ಟಡದಿಂದ ಕೆಳಕ್ಕೆ ಬಿದ್ದು ಎಕ್ಸಿಕ್ಯೂಟಿವ್ ಎಂಜಿನಿಯರ್ ಯೋಗೇಂದ್ರ ಪಾಂಡೆ ಜೂ.18ರಂದು ಅಸುನೀಗಿದ್ದರು.

ಅವರ ಬಳಿ ಆತ್ಮಹತ್ಯೆ ಟಿಪ್ಪಣಿ ಪತ್ತೆಯಾಗಿದ್ದರೂ ಅವರನ್ನು ಕಟ್ಟಡದಿಂದ ಕೆಳಕ್ಕೆ ತಳ್ಳಿ ಕೊಲೆ ಮಾಡಲಾಗಿದೆಯೆಂದು ಅವರ ಕುಟುಂಬ ವರ್ಗ ಆರೋಪಿಸಿದೆ.
ಏತನ್ಮಧ್ಯೆ ಕೇಂದ್ರ ಸರ್ಕಾರವು ಎಂಜಿನಿಯರ್‌ಗಳಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ರಾಜ್ಯಸರ್ಕಾರಕ್ಕೆ ತಿಳಿಸಿದ್ದು, ಇಂತಹ ಘಟನೆಗಳಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುತ್ತೆಂದು ತಿಳಿಸಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಗುಜರಾತ್ ತೀರದಲ್ಲಿ ಸೌದಿ ಹಡಗು ಕಣ್ಮರೆ
ಗಡಿಭಾಗದಿಂದ ಉಗ್ರರು ನುಸುಳುತ್ತಿಲ್ಲ: ಎ.ಕೆ.ಆಂಟನಿ
ರಾಷ್ಟ್ರೀಯ ಗುರುತು ಚೀಟಿ ಯೋಜನೆ ಅಧ್ಯಕ್ಷರಾಗಿ ನಿಲೇಕಣಿ
ಸಾರ್ಕೋಜಿ 'ಬುರ್ಖಾ' ಟೀಕೆಗೆ ದಿಯೋಬಂದ್ ಫತ್ವಾ
ಶಿಕ್ಷಣ ಸುಧಾರಣೆ: ಇನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆ ಇಲ್ಲ?
ಅತ್ಯಾಚಾರ ಪ್ರಕರಣ-ಇಲಾಖೆ ಮೇಲೆ ಗೂಬೆ ಕೂರಿಸಬೇಡಿ: ದೀಕ್ಷಿತ್