ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಸಲಿಂಗಕಾಮ ಸಕ್ರಮ: ಗೊಂದಲದಲ್ಲಿ ಕೇಂದ್ರ ಸರ್ಕಾರ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಲಿಂಗಕಾಮ ಸಕ್ರಮ: ಗೊಂದಲದಲ್ಲಿ ಕೇಂದ್ರ ಸರ್ಕಾರ
ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ಆರಂಭ
PTI
ಸಲಿಂಗಕಾಮವನ್ನು ಸಕ್ರಮಗೊಳಿಸಿರುವ ದೆಹಲಿ ಹೈಕೋರ್ಟ್ ತೀರ್ಪು ಕೇಂದ್ರ ಸರ್ಕಾರವನ್ನು ಗೊಂದಲದಲ್ಲಿ ಮುಳುಗಿಸಿದ್ದು, ಈ ಕುರಿತು ಅಂತಿಮ ನಿರ್ಧಾರದ ವಿವರಣೆ ನೀಡಲು ಸುಪ್ರೀಂಕೋರ್ಟ್‌ನಲ್ಲಿ ಹೆಚ್ಚಿನ ಕಾಲಾವಕಾಶ ಕೋರಲಾಗುವುದು ಎಂದು ಕೇಂದ್ರ ಕಾನೂನು ಸಚಿವ ಎಂ.ವೀರಪ್ಪ ಮೊಯ್ಲಿ ತಿಳಿಸಿದ್ದಾರೆ.

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಜ್ಯೋತಿಷಿಯೊಬ್ಬರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ 10ದಿನಗಳ ಹಿಂದೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, ಈ ಕುರಿತು ನಿಮ್ಮ ನಿಲುವೇನು ಎಂದು ಪ್ರಶ್ನಿಸಿತ್ತು. ಆದರೆ, ಇಷ್ಟು ದಿನ ಕಳೆದರೂ ಸರ್ಕಾರ ಅಫಿಡವಿತ್ ಸಲ್ಲಿಸಿಲ್ಲ. ಸೋಮವಾರ ಸಲಿಂಗಕಾಮದ ಕುರಿತ ಪ್ರಕರಣದ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದೆ.

ಆದರೆ ಸಲಿಂಗಕಾಮ ಸಕ್ರಮದ ಬಗ್ಗೆ ವಿವಿಧ ಧರ್ಮದ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಕೇಂದ್ರ ಸರ್ಕಾರ ಕಠಿಣ ನಿಲುವನ್ನು ತಳೆಯುವುದಿಲ್ಲ ಎಂದು ಮೊಯ್ಲಿ ಸ್ಪಷ್ಟಪಡಿಸಿದ್ದಾರೆ. ಸಲಿಂಗಕಾಮದ ಕುರಿತು ಧಾರ್ಮಿಕ ನಾಯಕರ ವಿರೋಧದ ಬಗ್ಗೆ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಿರುವ ಅಫಿಡವಿತ್‌ನಲ್ಲಿ ಪ್ರಮುಖವಾಗಿ ಉಲ್ಲೇಖಿಸುವುದಾಗಿ ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
26/11 ಘಟನೆಗೆ ನ್ಯಾಯ ಸಿಗಬೇಕು: ಹಿಲರಿ ಕ್ಲಿಂಟನ್
ಬಿಎಂಡಬ್ಲ್ಯು ಪ್ರಕರಣ;ನಂದಾ ಹಣೆಬರಹ ನಾಳೆ ನಿರ್ಧಾರ
ಮಾಯಾ ಸರ್ಕಾರದಿಂದ ನ್ಯಾಯ ಸಿಗುವ ಭರವಸೆ ಇಲ್ಲ: ಜೋಶಿ
ಅಕ್ಷರಧಾಮ ದಾಳಿ; ಶಂಕಿತ ಉಗ್ರನ ಬಂಧನ
ನವದೆಹಲಿಗೆ ಹಿಲರಿ ಭೇಟಿ:ಬಿಗಿ ಬಂದೋಬಸ್ತ್
ಅಡ್ವಾಣಿ,ಮೋದಿಗೆ ನಕ್ಸಲ್ ಬೆದರಿಕೆ;ಭದ್ರತೆಗೆ ಒತ್ತಾಯ