ಸೋಮವಾರದಿಂದ ಆರಂಭವಾಗಲಿರುವ ವಿಶ್ವ ಬ್ಯಾಡ್ಮಿಂಟನ್ ಚಾಂಪಿನ್ಶಿಫ್ ಪಂದ್ಯಾವಳಿಗೆ ಬೆದರಿಕೆಯೊಡ್ಡಲಾಗಿದೆ ಎಂಬ ಕುರಿತು ನಿಖರ ಮಾಹಿತಿ ಇಲ್ಲ ಎಂಬುದಾಗಿ ಹೇಳಿರುವ ಗೃಹಸಚಿವ ಪಿ. ಚಿದಂಬರಂ, ಪಂದ್ಯಾವಳಿಗೆ ಸಂಪೂರ್ಣ ಭದ್ರತೆ ಒದಗಿಸುವುದಾಗಿ ಹೇಳಿದ್ದಾರೆ.
"ಪಂದ್ಯಾವಳಿಯು ಸಂಪೂರ್ಣ ಭದ್ರತೆಯಲ್ಲಿ ನಡೆಯಲಿದ್ದು ನಾನು ಸಂಪೂರ್ಣ ತೃಪ್ತನಾಗಿದ್ದೇನೆ. ಈ ಕುರಿತು ಯಾರು ಭೀತಿ ಪಡುವ ಅವಶ್ಯಕತೆ ಇಲ್ಲ" ಎಂದು ಅವರು ಈ ಕುರಿತು ಸುದ್ದಿಗಾರರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಹೇಳಿದ್ದಾರೆ.
ಹೈದರಬಾದ್ ಪೊಲೀಸರರೊಂದಿಗೆ ಹಂಚಿಕೊಳ್ಳಲಾಗಿರುವ ಮಾಮೂಲಿ ಮಾಹಿತಿಯಂತೆ ಅಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಗೃಹಸಚಿವರು ಹೇಳಿದ್ದಾರೆ.
ಪಂದ್ಯಾವಳಿಗೆ ಲಷ್ಕರೆ ಉಗ್ರರು ಬೆದರಿಕೆ ಒಡ್ಡಿದ್ದಾರೆ ಎಂದು ಹೇಳಲಾಗಿದ್ದು, ಹೈದರಾಬಾದಿನಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಹೈದರಾಬಾದ್ ವರದಿಗಳು ಹೇಳಿವೆ.