ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ವೈದ್ಯರ ಸಮಿತಿ ರೂಪಿಸುವಂತೆ ಅಜಾದ್‌ಗೆ ಸಲಹೆ (H1N1 | Gulam Nabi | Manmohan Singh | Doctors panel)
 
ಸ್ವೈನ್ ಫ್ಲೂಗೆ ರಾಷ್ಟ್ರದಲ್ಲಿ ನಾಲ್ಕು ಮಂದಿ ಬಲಿಯಾಗಿರುವ ಹಿನ್ನೆಲೆಯಲ್ಲಿ, ಭಯಭೀತರಾಗಿರುವ ಜನರಿಗೆ 'ಸರಿಯಾದ ಮಾಹಿತಿ' ನೀಡಲು ವೈದ್ಯರ ಸಮಿತಿಯನ್ನು ರೂಪಿಸಲು ಪ್ರಧಾನಿ ಮನಮೋಹನ್ ಸಿಂಗ್ ಅವರು ಆರೋಗ್ಯ ಸಚಿವ ಗುಲಾಂ ನಬಿ ಅಜಾದ್ ಅವರಿಗೆ ಸೂಚಿಸಿದ್ದಾರೆ ಎಂದು ಅಧಿಕೃತ ಮೂಲಗಳು ಹೇಳಿವೆ.

ಈ ಸಮಿತಿಯು ಮಾಧ್ಯಮಗಳಿಗೂ ಸರಿಯಾದ ಮಾಹಿತಿ ನೀಡಬೇಕು ಎಂದು ಹೇಳಿರುವ ಪ್ರಧಾನಿ ಈ ಮೂಲಕ ತಪ್ಪು ಕಲ್ಪನೆಗಳನ್ನು ತಡೆಯಬಹುದು ಎಂದು ಹೇಳಿದ್ದಾರೆ.

ಎಚ್1ಎನ್1 ವೈರಸ್ ಅನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಲು ಅಜಾದ್ ಭಾನುವಾರ ಮುಂಜಾನೆ ಪ್ರಧಾನಿಯವರಿಗೆ ದೂರವಾಣಿ ಕರೆ ನೀಡಿದ ವೇಳೆ ಅವರು ಈ ಸೂಚನೆ ನೀಡಿದ್ದಾರೆ.

ಸಾಕಷ್ಟು ತಮಿಫ್ಲೂ ಔಷಧಿ ಇರುವುದಾಗಿ ಮತ್ತು ಸೋಂಕು ಪೀಡಿತರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ ಎಂದು ಸಚಿವರು ಪ್ರಧಾನಿಯವರಿಗೆ ತಿಳಿಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ