ಸ್ವಾತಂತ್ರ್ಯ ದಿನಾಚರಣೆಯಂದು ಉಗ್ರವಾದಿ ಸಂಘಟನೆ ಲಷ್ಕರ್-ಇ-ತೋಯ್ಬಾವು ದಾಳಿ ನಡೆಸುವ ಸಂಭವವಿದೆ ಎಂಬುದಾಗಿ ಗುಪ್ತಚರ ಇಲಾಖೆಯು ಮಂಗಳವಾರ ಎಚ್ಚರಿಕೆ ನೀಡಿದೆ.
ಈ ಎಚ್ಚರಿಕೆಯ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಮುಂಚಿತವಾಗಿ ಕೇಂದ್ರ ಗೃಹಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ.
ಎಲ್ಲಾ ರಾಜ್ಯಗಳ ಡಿಜಿಪಿಗಳಿಗೆ ಆಗಸ್ಟ್ ಎಂಟರಂದು ಎಚ್ಚರಿಕೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪ್ರಮುಖ ಐಟಿ ಹಬ್ಗಳು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಮತ್ತು ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸುವಂತೆ ಸೂಚಿಸಲಾಗಿದೆ. ಕರಾವಳಿ ರಾಜ್ಯಗಳು ಕರಾವಳಿ ಏಜೆನ್ಸಿಗಳೊಂದಿಗೆ ಸಮನ್ವಿಯಿಸುವಂತೆ ನಿರ್ದೇಶನ ನೀಡಲಾಗಿದೆ.