ಕೋಪೆನ್ಹೇಗನ್ನಲ್ಲಿ ರಾಷ್ಟ್ರದ ಹಿತಾಸಕ್ತಿಗೆ ಧಕ್ಕೆಯಾಗುವಂತಹ ಯಾವುದೇ ಒಪ್ಪಂದಗಳಿಗೆ ಭಾರತವು ಮಣಿಯುವುದಿಲ್ಲ ಮತ್ತು ಯಾವುದನ್ನೂ ಮುಚ್ಚಿಡುವ ಪ್ರಮೇಯವೇ ಇಲ್ಲ ಎಂಬುದಾಗಿ ಸರ್ಕಾರ ಸೋಮವಾರ ಹೇಳಿದೆ. ಕೋಪೆನ್ಹೇಗನ್ನಲ್ಲಿ ಪರಿಸರ ಸಮ್ಮೇಳನ ನಡೆಯುತ್ತಿದ್ದು, ಇದರಲ್ಲಿ ಭಾರತ ಪ್ರಮುಖ ಪಾತ್ರ ವಹಿಸುತ್ತಿರುವ ಸಂದರ್ಭದಲ್ಲಿ ಈ ಹೇಳಿಕೆ ಹೊರಬಿದ್ದಿದೆ.ಸಂಸತ್ತಿನಲ್ಲಿ ಒಮ್ಮತ ಮೂಡಿಸಲು ಯತ್ನಿಸಿದ ಪರಿಸರ ಸಚಿವ ಜೈರಾಂ ರಮೇಶ್ ಅವರು ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಭಾರತದ ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆಯುಂಟಾಗುವಂತಹ ಯಾವುದೇ ರಾಜಿಗೆ ಸರ್ಕಾರ