ಸರ್ವೋಚ್ಚ ನ್ಯಾಯಾಲಯದಲ್ಲಿ ಮಹಿಳಾ ನ್ಯಾಯಮೂರ್ತಿಗಳ ಅನುಪಸ್ಥಿತಿ ಶೀಘ್ರದಲ್ಲಿ ಅಂತ್ಯಗೊಳ್ಳಲಿದೆ. ರಾಷ್ಟ್ರಾಧ್ಯಕ್ಷೆ ಪ್ರತಿಭಾ ಪಾಟೀಲ್, ಕೂಡಲೇ ಮಹಿಳಾ ನ್ಯಾಯಮೂರ್ತಿಗಳನ್ನು ನೇಮಕ ಮಾಡುವಂತೆ ಆದೇಶಿಸಿದ್ದಾರೆ.
ಸರ್ವೋಚ್ಚ ನ್ಯಾಯಾಲಯದಲ್ಲಿ ದೀರ್ಘಾವಧಿಯಿಂದ ಮಹಿಳಾ ನ್ಯಾಯಮೂರ್ತಿಗಳ ಅನುಪಸ್ಥಿತಿಯ ಕೊರತೆ ಎದ್ದುಕಾಣುತ್ತಿರುವ ಹಿನ್ನೆಲೆಯಲ್ಲಿ, ಮಹಿಳಾ ನ್ಯಾಯಾಮೂರ್ತಿಗಳ ನೇಮಕಕ್ಕೆ ಸೂಕ್ತ ಸಮಯವಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಕೆ.ಜಿ ಬಾಲಕೃಷ್ಣನ್ ಅವರಿಗೆ ರಾಷ್ಟ್ರಾಧ್ಯಕ್ಷೆ ಪ್ರತಿಭಾ ಪಾಟೀಲ್ ರವಾನಿಸಿದ ಪತ್ರದಲ್ಲಿ ತಿಳಿಸಿದ್ದಾರೆ.
ಕಾನೂನು ಸಚಿವರಾದ ವೀರಪ್ಪಾ ಮೊಯ್ಲಿ ಶೀಘ್ರದಲ್ಲಿ ಮುಖ್ಯನ್ಯಾಯಮೂರ್ತಿ ಬಾಲಕೃಷ್ಣನ್ ಅವರನ್ನು ಭೇಟಿ ಮಾಡಿ ಶೀಘ್ರದಲ್ಲಿ ರಾಷ್ಟ್ರಪತಿಯವರ ಇಚ್ಚೆಯಂತೆ ಮಹಿಳಾ ನ್ಯಾಯಮೂರ್ತಿಗಳ ನೇಮಕ ಕುರಿತಂತೆ ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.