ಪರಿಹಾರಕ್ಕಾಗಿ ಕೇಂದ್ರ
ಮಂಗಳೂರಿನಲ್ಲಿ ಸಂಭವಿಸಿದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ಶೀಘ್ರವಾಗಿ ಪರಿಹಾರ ವಿತರಿಸಲು ಏರ್ ಇಂಡಿಯಾ ಆರು ಕೇಂದ್ರಗಳನ್ನು ಪ್ರಾರಂಭಿಸಿದೆ. ಮುಂಬೈ, ಕೋಝಿಕೋಡ್, ದೆಹಲಿ, ದುಬೈ, ಚೆನ್ನೈ ಮತ್ತು ಮಂಗಳೂರಿನಲ್ಲಿ ಈ ಕೇಂದ್ರಗಳನ್ನು ಸ್ಥಾಪಿಸಿದೆ.