ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಗಂಗಾ ನದಿ ದೋಣಿ ದುರಂತಕ್ಕೆ 50ಕ್ಕೂ ಹೆಚ್ಚು ಬಲಿ (River Gange | boat capsize | Uttar Pradesh | Northern India)
Bookmark and Share Feedback Print
 
ಉತ್ತರ ಭಾರತದ ಗಂಗಾ ನದಿಯಲ್ಲಿ ನಡೆದಿರುವ ಭೀಕರ ದೋಣಿ ದುರಂತದಲ್ಲಿ ಕನಿಷ್ಠ 50 ಮಂದಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದ್ದು, ಇದುವರೆಗೆ 12 ಶವಗಳನ್ನು ಮೇಲೆತ್ತಲಾಗಿದೆ.

ಪ್ರಾರ್ಥನಾ ಕಾರ್ಯಕ್ರಮವೊಂದಕ್ಕಾಗಿ ಉತ್ತರ ಪ್ರದೇಶದ ದುಬಾಹರ್ ಪ್ರದೇಶದಲ್ಲಿನ ದೋಣಿಯೊಂದನ್ನು ಬಾಡಿಗೆ ಪಡೆಯಲಾಗಿತ್ತು. ಈ ದೋಣಿಯಲ್ಲಿ 60 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಇಲ್ಲಿನ ಜಿಲ್ಲಾದಿಕಾರಿ ಸೆಂಥಿಲ್ ಪಾಂಡ್ಯನ್ ತಿಳಿಸಿದ್ದಾರೆ.

ಒಜಾವಾಲಿಯಾ ಘಾಟ್ ಪ್ರದೇಶದಿಂದ ಕಾರ್ಯಕ್ರಮವೊಂದಕ್ಕಾಗಿ ನದಿಯನ್ನು ದಾಟಿ ಮತ್ತೊಂದು ಬದಿಗೆ ಹೋಗಲು ದೋಣಿಯನ್ನು ಬಾಡಿಗೆ ಪಡೆಯಲಾಗಿತ್ತು. ಈ ಸಂದರ್ಭದಲ್ಲಿ ದುರಂತ ಸಂಭವಿಸಿದ್ದು, ನಿರ್ದಿಷ್ಟ ಕಾರಣಗಳು ತಿಳಿದು ಬಂದಿಲ್ಲ ಎಂದು ವರದಿಗಳು ಹೇಳಿವೆ.

ಇದರಲ್ಲಿ ಪ್ರಯಾಣಿಸುತ್ತಿದ್ದ ಮಂದಿ ನಾಲ್ಕು ಕುಟುಂಬಗಳಿಗೆ ಮಾತ್ರ ಸೇರಿದವರಾಗಿದ್ದಾರೆ. ದೋಣಿ ಮಗುಚಿ ಬಿದ್ದುದರಿಂದ ದುರಂತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ