ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಪಾಕ್‌ನಿಂದ ವಿಶ್ವಾಸಾರ್ಹ ಕ್ರಮ: ಭಾರತ ಒತ್ತಾಯ (India | Pakistan | Nirupam Rao | Mumbai attack)
Bookmark and Share Feedback Print
 
26/11ರ ಮುಂಬೈ ಭಯೋತ್ಪಾದಕರ ದಾಳಿ ವಿಚಾರಣೆಗೆ ಸಂಬಂಧಿಸಿದಂತೆ ನೆರೆಯ ಪಾಕಿಸ್ತಾನ ವಿಶ್ವಾಸಾರ್ಹ ಕ್ರಮ ಕೈಗೊಳ್ಳಬೇಕು ಎಂದು ಭಾರತ ಒತ್ತಾಯಿಸಿದೆ.

ದ್ವಿಪಕ್ಷೀಯ ಮಾತುಕತೆ ಪುನಾರಂಭಗೊಳ್ಳಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವಂತೆಯೇ ಭಾರತ ಹೇಳಿಕೆಯು ಮಹತ್ವ ಗಿಟ್ಟಿಸಿದೆ. ಮುಂಬೈ ದಾಳಿಗೆ ಸಂಬಂಧಿಸಿದಂತೆ ಭಾರತ ಒದಗಿಸಿಲಾಗಿರುವ ಸಾಕ್ಷಾಧಾರಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ವಿದೇಶಾಂಗ ಕಾರ್ಯದರ್ಶಿ ನಿರುಪಮಾ ರಾವ್ ಒತ್ತಾಯಿಸಿದರು.

ಮುಂಬರುವ ದ್ವಿಪಕ್ಷೀಯ ಮಾತುಕತೆಯಲ್ಲಿ ಈ ವಿಷಯ ಪ್ರಮುಖ ಚರ್ಚಾ ವಿಷಯವಾಗಲಿದ್ದು, ಕೇಂದ್ರ ಗೃಹ ಸಚಿವ ಪಾಕಿಸ್ತಾನದ ಒಳಾಡಳಿತ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ ಎಂದವರು ಹೇಳಿದರು.

ಇತ್ತೀಚೆಗಷ್ಟೇ ಭಾರತ ಮುಂಬೈ ಭಯೋತ್ಪಾದಕರ ದಾಳಿಗೆ ಸಂಬಂಧಪಟ್ಟಂತೆ ಪಾಕ್‌‍ಗೆ 11 ಹೆಚ್ಚುವರಿ ಸಾಕ್ಷಗಳನ್ನು ಒದಗಿಸಿತ್ತು. ಇದರ ಆಧಾರದಲ್ಲಿ ಪಾಕಿಸ್ತಾನದಿಂದ ಖಚಿತ ಕ್ರಮ ಉಂಟಾಗಬೇಕಾಗಿದೆ ಎಂದು ನಿರುಪಮಾ ಒತ್ತಾಯಿಸಿದರು.

ಕದನ ವಿರಾಮ ಉಲ್ಲಂಘನೆಯನ್ನು ಕೂಡಾ ಗಂಭೀರವಾಗಿ ಪರಿಗಣಿಸಲಾಗಿದೆ ಎಂದವರು ಹೇಳಿದರು. ಈ ಬಗ್ಗೆ ಪಾಕ್ ಸರಕಾರಕ್ಕೆ ತಿಳಿಸಲಾಗಿದೆ ಎಂದು ನಿರುಪಮಾ ಹೇಳಿದರು.

ವಿದೇಶಾಂಗ ಕಾರ್ಯದರ್ಶಿ ನಿರುಪಮಾ ರಾವ್ ಬುಧವಾರ ಪಾಕಿಸ್ತಾನಕ್ಕೆ ತೆರಳಲಿದ್ದಾರೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ 'ವೆಬ್‌ದುನಿಯಾ'ವನ್ನು ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸಂಬಂಧಿತ ಮಾಹಿತಿ ಹುಡುಕಿ