ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಅಮಾನತು:ಹೈಕಮಾಂಡ್‌ನಿಂದ ಜಗನ್‌ಗೆ ಎಚ್ಚರಿಕೆ ಸಂದೇಶ (Delhi | Rajasekhara Reddy | Rosaiah | Ambati Rambabu)
Bookmark and Share Feedback Print
 
ಕಡಪಾ ಸಂಸದ ಜಗನ್‌ಮೋಹನ್ ರೆಡ್ಡಿ ಬೆಂಬಲಿಗರಿಗೆ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆಯ ಸಂದೇಶ ರವಾನಿಸುವ ನಿಟ್ಟಿನಲ್ಲಿ, ರಾಜ್ಯದ ಪ್ರಧಾನ ಕಾರ್ಯದರ್ಶಿ ಅಂಬಾಟಿ ರಾಮ್‌ಬಾಬು ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಅಮಾನತುಗೊಳಿಸಿದೆ.

ಜಗನ್ಮೋಹನ್ ರೆಡ್ಡಿಯವರ ಸ್ವಾಂತನ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ರಾಮ್‌ಬಾಬು, ದಿವಂಗತ ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ್ ರೆಡ್ಡಿ ವಿಮಾನ ಅಪಘಾತದಲ್ಲಿ ಮರಣ ಹೊಂದಿದ ಆಘಾತದಿಂದಾಗಿ ಸಾವನ್ನಪ್ಪಿದವರ ಕುಟುಂಬಗಳನ್ನು ಭೇಟಿ ಮಾಡುವುದರಲ್ಲಿ ಯಾವ ತಪ್ಪಿದೆ ಎಂದು ಹೈಕಮಾಂಡ್ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಸ್ವಾಂತನ ಯಾತ್ರೆಯಿಂದ ದೂರವಿರುವಂತೆ ಶಾಸಕರಿಗೆ ಸಂಸದರಿಗೆ ಮುಖ್ಯಮಂತ್ರಿ ಕೆ.ರೋಸಯ್ಯ ನೀಡಿದ ಕರೆಯನ್ನು ಟೀಕಿಸಿದ ಸಂಸದ ಜಗನ್ಮೋಹನ್ ರೆಡ್ಡಿಯವರೆಗೆ ಹೈಕಮಾಂಡ್ ಎಚ್ಚರಿಕೆಯ ಸಂದೇಶ ರವಾನಿಸಿದಂತಾಗಿದೆ.

ಸ್ವಾಂತನ ಯಾತ್ರೆ ನಡೆಸದಂತೆ ಕಾಂಗ್ರೆ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿಯವರ ಸಲಹೆಯನ್ನು ತಿರಸ್ಕರಿಸಿ,ಯಾತ್ರೆಯಲ್ಲಿ ಪಾಲ್ಗೊಂಡ ಜಗನ್‌ಗೆ, ಕಾಂಗ್ರೆಸ್ ಹೈಕಮಾಂಡ್ ಕೆಂಡ ಕಾರಿದೆ.

ಏತನ್ಮದ್ಯೆ, ಕಾಂಗ್ರೆಸ್ ಪಕ್ಷ ಜಗನ್ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗದೆ, ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿದೆ.ಯುವ ಸಂಸದನಿಗೆ ಸೂಕ್ತ ಮಾರ್ಗದರ್ಶನದ ಅವಶ್ಯಕತೆಯಿದೆ ಎಂದು ಹೇಳಿಕೆ ನೀಡಿದೆ.
ಸಂಬಂಧಿತ ಮಾಹಿತಿ ಹುಡುಕಿ