ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಅನೈತಿಕ ಸಂಬಂಧಕ್ಕೆ ಅಡ್ಡಿ; ಮಗನಿಗೆ ಬೆಂಕಿ ಹಚ್ಚಿದ ತಾಯಿ! (Andrapradesh | Karnool | Police | Laxmi devi)
Bookmark and Share Feedback Print
 
ತಮ್ಮ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಹೆತ್ತ ಮಗನನ್ನೇ ತಾಯಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ಅಮಾನವೀಯ ಘಟನೆ ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ನಡೆದಿದೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಕರ್ನೂಲ್ ಜಿಲ್ಲೆಯ ಲಕ್ಷ್ಮೀದೇವಿ ಎಂಬಾಕೆ ಕಳೆದ ಎಂಟು ವರ್ಷಗಳ ಹಿಂದೆಯೇ ಗಂಡನನ್ನು ಬಿಟ್ಟಿದ್ದಳು. ಈಕೆಗೆ ಎಂಟು ವರ್ಷ ಪ್ರಾಯದ ಭಾಸ್ಕರ ಎಂಬ ಮಗನಿದ್ದಾನೆ. ಆದರೆ ಲಕ್ಷ್ಮೀದೇವಿ ಶ್ರೀನಿವಾಸ ಎಂಬ ವ್ಯಕ್ತಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು.

ಲಕ್ಷ್ಮೀದೇವಿ ಮತ್ತು ಶ್ರೀನಿವಾಸರ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದು ಮಗ ಭಾಸ್ಕರ. ತಮ್ಮಿಬ್ಬರ ಅನೈತಿಕ ಸಂಬಂಧದ ಕಳ್ಳಾಟಕ್ಕೆ ಸಮಸ್ಯೆಯಾಗಿರುವ ಮಗನನ್ನೇ ಕೊಂದು ಬಿಡುವ ನಿರ್ಧಾರಕ್ಕೆ ಲಕ್ಷ್ಮೀದೇವಿ ಬಂದಿದ್ದಳು.

ಅದಕ್ಕೆ ಸಿದ್ದತೆ ಮಾಡಿಕೊಂಡ ಲಕ್ಷ್ಮೀದೇವಿ ಮಗ ಭಾಸ್ಕರ ರಾತ್ರಿ ಮಲಗಿದ್ದಾಗ ಮುಗ್ದ ಬಾಲಕನ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿಹಚ್ಚಿದ್ದಳು. ಆದರೆ ಚಾಲಕಿ ಲಕ್ಷ್ಮೀದೇವಿ ಇದೊಂದು ಆಕಸ್ಮಿಕ ಘಟನೆ ಎಂದು ಬೊಬ್ಬೆ ಹೊಡೆದಿದ್ದಳು.

ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದ ಮಗನನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದ. ಇದೀಗ ಕರ್ನೂಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ