ಕೇಂದ್ರ ಜಾಗೃತ ಆಯುಕ್ತರನ್ನಾಗಿ ನೇಮಕ ಮಾಡುವ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಮತ್ತು ಉನ್ನತ ಮಟ್ಟದ ಸಮಿತಿಗೆ ಪಿ.ಜೆ. ಥಾಮಸ್ ಕಳಂಕಿತರು ಎನ್ನುವುದು ತಿಳಿದಿರಲಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯಕ್ಕೆ ಕೇಂದ್ರ ಸರಕಾರ ಹೇಳಿರುವುದನ್ನು ತೀವ್ರವಾಗಿ ಪ್ರತಿಭಟಿಸಿರುವ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್, ಸರಕಾರವು ಸುಳ್ಳು ಹೇಳುತ್ತಿದೆ. ನಾನು ಈ ಸಂಬಂಧ ಸುಪ್ರೀಂ ಕೋರ್ಟಿಗೆ ಹೋಗುತ್ತೇನೆ ಎಂದು ಪ್ರಕಟಿಸಿದ್ದಾರೆ.ಇದರೊಂದಿಗೆ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರವು ಮತ್ತೊಮ್ಮೆ ಮುಜುಗರಕ್ಕೆ ಸಿಲುಕಿದೆ.ಕೇಂದ್ರ ಜಾಗೃತ