ನವದೆಹಲಿ: ಹಗರಣಗಳು, ನೇಮಕಾತಿಗಳು ಮತ್ತು ಇನ್ನೂ ಹಲವು ನಿರ್ಧಾರಗಳಿಗಾಗಿ ಸತತವಾಗಿ ಸುಪ್ರೀಂಕೋರ್ಟಿನಿಂದ ಛೀಮಾರಿ ಹಾಕಿಸಿಕೊಂಡಿದ್ದ ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕೆ ಗುರುವಾರ ಮತ್ತೊಂದು ತಪರಾಕಿ. 2010ರ ಸೆಪ್ಟೆಂಬರ್ 3ರಂದು ಹೊರಡಿಸಲಾದ, ಕೇಂದ್ರ ಜಾಗೃತ ದಳ ಆಯುಕ್ತ (ಸಿವಿಸಿ) ಪಿ.ಜೆ.ಥಾಮಸ್ ನೇಮಕಾತಿ ಆದೇಶವೇ ಅಸಿಂಧು ಮತ್ತು ಕಾನೂನು ಬಾಹಿರ ಎಂದು ಸುಪ್ರೀಂ ಕೋರ್ಟು ತೀರ್ಪು ನೀಡಿದೆ.ಭ್ರಷ್ಟಾಚಾರ ವಿರುದ್ಧ ಹೋರಾಡುವ ಜಾಗೃತ ದಳಕ್ಕೆ ಕೇರಳದ ಪಾಮೋಲಿನ್ ಆಮದು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳಂಕಿತರಾಗಿದ್ದ