ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಉಪವಾಸಕ್ಕಿಂತ ಮುನ್ನ ಚಳವಳಿ ಮಾಡಿ: ಅಣ್ಣಾಗೆ ದಿಗ್ವಿಜಯ್ ಸಲಹೆ (Anna Hazare | Mahatma Gandhiji | Fast | Protest)
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಮತ್ತೆ ಬಾಯಿ ಬಿಟ್ಟಿದ್ದಾರೆ. ಆಗಸ್ಟ್ 16ರಂದ ಭ್ರಷ್ಟಾಚಾರ ವಿರೋಧೀ ಹೋರಾಟಗಾರ ಅಣ್ಣಾ ಹಜಾರೆ ಕೈಗೊಳ್ಳಲಿರುವ ಉಪವಾಸ ಸತ್ಯಾಗ್ರಹಕ್ಕೆ ಮೊದಲು, ಅವರು ಪ್ರತಿಭಟನಾ ಪ್ರದರ್ಶನವನ್ನು ನಡೆಸಬೇಕಾಗಿದೆ ಎಂದು ಸಲಹೆ ನೀಡಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಸುದ್ದಿಗಾರರೊಂದಿಗೆ ಗುರುವಾರ ಮಾತನಾಡುತ್ತಿದ್ದ ಅವರು, "ಉಪವಾಸ ಸತ್ಯಾಗ್ರಹ ಮಾಡುವ ಅಣ್ಣಾ ನಿರ್ಧಾರವು ಒಳ್ಳೆಯದೇ. ಆದರೆ, ಮಹಾತ್ಮ ಗಾಂಧೀಜಿ ಅವರು ಪ್ರತಿ ಬಾರಿಯೂ ಉಪವಾಸ ಸತ್ಯಾಗ್ರಹಕ್ಕೆ ಮೊದಲು ಪ್ರತಿಭಟನಾ ಚಳವಳಿ ಹಮ್ಮಿಕೊಳ್ಳುತ್ತಿದ್ದರು ಎಂಬುದನ್ನು ನಾವಿಲ್ಲಿ ನೆನಪಿಸಿಕೊಳ್ಳಬೇಕು" ಎಂದು ವ್ಯಂಗ್ಯವಾಡಿದ್ದಾರೆ.

ಅಣ್ಣಾ ಅವರ ತಂಡವು ಲೋಕಪಾಲ ಮಸೂದೆಯ ಕರಡು ತಯಾರಿಸಿ ಕೊಟ್ಟಿದೆ. ಇನ್ನು ಸಂಸತ್ತಿನಲ್ಲಿ ಚುನಾಯಿತ ಪ್ರತಿನಿಧಿಗಳು ಉಳಿದ ಕೆಲಸವನ್ನು ಮಾಡುತ್ತಾರೆ ಎಂದು ಮಾರ್ಮಿಕವಾಗಿಯೇ ನುಡಿದ ದಿಗ್ವಿಜಯ್ ಸಿಂಗ್, ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂಬುದು ತಮ್ಮ ವೈಯಕ್ತಿಕ ಅಭಿಲಾಷೆ ಎಂದರು.

ವೆಬ್‌ದುನಿಯಾ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!
ಇವನ್ನೂ ಓದಿ