ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್ದುನಿಯಾಕ್ಕೆ ಭೇಟಿ ಕೊಡಿ
ಭೂಸ್ವಾಧೀನ ವಿರುದ್ಧ ರೈತರು ಹೋರಾಟ ನಡೆಸುತ್ತಿದ್ದ ಭಟ್ಟಾ, ಪರ್ಸಾಲ್ ಗ್ರಾಮಗಳಿಂದಲೇ ಮಂಗಳವಾರ ಬೆಳಿಗ್ಗೆ 'ಕಿಸಾನ್ ಸಂದೇಶ ಯಾತ್ರೆ' ಆರಂಭಿಸಿರುವ ರಾಹುಲ್ ಗಾಂಧಿ, ಆಲಿಗಢದಲ್ಲಿ ಶನಿವಾರ ನಡೆಯುವ 'ಕಿಸಾನ್ ಮಹಾಪಂಚಾಯತ್' ರ್ಯಾಲಿಯವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಕಾಂಗ್ರೆಸ್ ಪ್ರತಿಪಕ್ಷ ಸ್ಥಾನದಲ್ಲಿರುವ ಕರ್ನಾಟಕದಲ್ಲಿಯೂ ಇದೇ ರೀತಿ 'ಕಾಂಗ್ರೆಸ್ ನಡಿಗೆ ಜನರ ಬಳಿಗೆ' ಎಂಬ ಯಾತ್ರೆಯನ್ನು ಹಮ್ಮಿಕೊಂಡಿರುವುದು ಇಲ್ಲಿ ಗಮನಾರ್ಹ. ಈ ಹಿಂದೆಯೂ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಿತ್ತು.