ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಬಿಜೆಪಿ ಆರೋಪಗಳಿಗೆ ಸದನದಲ್ಲಿ ಸೂಕ್ತ ಉತ್ತರ:ಚಿದು (Government | BJP charges | Parliament | Chidambaram)
ಬಿಜೆಪಿ ಸೇರಿದಂತೆ ವಿರೋಧ ಪಕ್ಷಗಳ 2ಜಿ ತರಂಗ ಗುಚ್ಚ ಹಾಗೂ ಇತರ ಹಗರಣಗಳ ಬಗ್ಗೆ ಸರಕಾರ ಸದನದಲ್ಲಿ ಸೂಕ್ತ ಉತ್ತರ ನೀಡಲಿದೆ. ಆದರೆ, ಕೆಲ ಉಗ್ರರ ದಾಳಿ ಪ್ರಕರಣಗಳ ತನಿಖಾ ವೇಗವನ್ನು ಸರಕಾರ ಹೆಚ್ಚಿಸುವ ಅಗತ್ಯವಿದೆ ಎಂದು ಕೇಂದ್ರ ಗೃಹಸಚಿವ ಪಿ.ಚಿದಂಬರಂ ಹೇಳಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಸಂಸತ್ತಿನಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನಡೆಯಲಿರುವ ಚರ್ಚೆಯಲ್ಲಿ ವಿರೋಧ ಪಕ್ಷಗಳ ಆರೋಪಗಳಿಗೆ ಉತ್ತರಿಸಲಾಗುವುದು.. ಬಿಜೆಪಿ ಆರೋಪಗಳಿಗೆ ಕಾಂಗ್ರೆಸ್ ಪಕ್ಷದ ವಕ್ತಾರರು ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪ್ರಧಾನಮಂತ್ರಿ ಮನಮೋಹನ್ ಸಿಂಗ್, ವಿರೋಧ ಪಕ್ಷಗಳು ಕೂಡಾ ಭ್ರಷ್ಟಾಚಾರದಲ್ಲಿ ಭಾಗಿಯಾಗಿವೆ ಎನ್ನುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಪ್ರಧಾನಮಂತ್ರಿ ಹೇಳಿಕೆಗೆ ಉತ್ತರ ನೀಡಲು ಬಯಸುವುದಿಲ್ಲ, ಪ್ರಧಾನಿ ಮತ್ತು ವಿರೋಧಪಕ್ಷದ ನಾಯಕರಿಗೆ ಆರೋಪ ಪ್ರತ್ಯಾರೋಪ ಮಾಡುವ ಅವಕಾಶಗಳಿವೆ ಎಂದು ಗೃಹ ಸಚಿವ ಪಿ.ಚಿದಂಬರಂ ತಿಳಿಸಿದ್ದಾರೆ.

ವೆಬ್‌ದುನಿಯಾ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಸರಕಾರ, ಬಿಜೆಪಿ ಆರೋಪ, ಸಂಸತ್ತು, ಅಧಿವೇಶನ, ಚಿದಂಬರಂ