ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ನಾಳೆಯಿಂದ ರಾಮಲೀಲಾ ಮೈದಾನದಲ್ಲಿ ಅಣ್ಣಾ ನಿರಶನ (Anna Hazare | Ramlila Ground | Lokpal Bill)
PTI
ಸಶಕ್ತ ಲೋಕಪಾಲ ಮಸೂದೆಗಾಗಿ ಒತ್ತಾಯಿಸಿ ಆಮರಣ ನಿರಶನಕ್ಕೆ ಮುಂದಾಗಿರುವ ಅಣ್ಣಾ ಹಜಾರೆ, ನಾಳೆ ತಿಹಾರ್ ಜೈಲಿನಿಂದ ರಾಮಲೀಲಾ ಮೈದಾನಕ್ಕೆ ತೆರಳಲಿದ್ದಾರೆ ಎಂದು ಅಣ್ಣಾ ತಂಡದ ಸದಸ್ಯ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಕಳೆದ ಹಲವು ದಿನಗಳಿಂದ ಸುರಿಯುತ್ತಿದ್ದ ಮಳೆಯಿಂದಾಗಿ ರಾಮಲೀಲಾ ಮೈದಾನ ಅಸ್ತವ್ಯಸ್ತವಾಗಿದೆ. ಲೋಕೋಪಯೋಗಿ ಇಲಾಖೆಗಳು ಮೈದಾನವನ್ನು ಸುಸ್ಥಿತಿಗೆ ತರಲು ಶ್ರಮಿಸುತ್ತಿರುವುದರಿಂದ ಇಂದು ರಾಮಲೀಲಾ ಮೈದಾನಕ್ಕೆ ತೆರಳದಿರಲು ಅಣ್ಣಾ ಹಜಾರೆ ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ.

ರಾಮಲೀಲಾ ಮೈದಾನದಲ್ಲಿ ನಡೆಯುತ್ತಿರುವ ಸಿದ್ಧತಾ ಕಾರ್ಯಗಳ ಬಗ್ಗೆ ಅಣ್ಣಾ ಹಜಾರೆಯವರಿಗೆ ಮಾಹಿತಿ ನೀಡಲಾಗಿದೆ. ನಾಳೆ ಬೆಳಿಗ್ಗೆ ಹಜಾರೆಯವರು ನಾಳೆ ರಾಮಲೀಲಾ ಮೈದಾನಕ್ಕೆ ತೆರಳಲಿದ್ದಾರೆ ಎಂದು ವಿವರಣೆ ನೀಡಿದ್ದಾರೆ.

ಸ್ವಾಮಿ ಅಗ್ನಿವೇಶ್ ಮಾತನಾಡಿ, ತಿಹಾರ್ ಜೈಲಿನಿಂದ ಅಣ್ಣಾ ರಾಮಲೀಲಾ ಮೈದಾನಕ್ಕೆ ತೆರಳುವ ಸಮಯದ ಬಗ್ಗೆ ಖಚಿತ ಮಾಹಿತಿಯಿಲ್ಲ. ನಂತರ ಘೋಷಿಸಲಾಗುವುದು. ರಾಮಲೀಲಾ ಮೈದಾನದಲ್ಲಿ ಸಿದ್ಧತಾ ಕಾರ್ಯಗಳು ಸಮರೋಪಾದಿಯಲ್ಲಿ ನಡೆಯುತ್ತಿವೆ. ಇಂದು ಸಂಜೆಯ ವೇಳೆಗೆ ಸಂಪೂರ್ಣವಾಗಿ ಸಜ್ಜಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಅಣ್ಣಾ ಹಜಾರೆ, ರಾಮಲೀಲಾ ಮೈದಾನ, ಲೋಕಪಾಲ ಮಸೂದೆ