ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಹರೇನ್ ಪಾಂಡ್ಯ ಹತ್ಯೆ: ಮರು ತನಿಖೆಗೆ ಪತ್ನಿ ಆಗ್ರಹ (Haren pandya | Narendra modi | Murder | CBI | Supreme Court | Latest Politics News in Kannada | India News Politics)
PTI
ಗುಜರಾತ್ ಮಾಜಿ ಸಚಿವ ಹರೇನ್ ಪಾಂಡ್ಯ ಅವರ ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಅವರ ಪತ್ನಿ ಜಾಗೃತಿ ಪಾಂಡ್ಯ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಪಾಂಡ್ಯ ಕೊಲೆ ಪ್ರಕರಣದ ಎಲ್ಲ 12 ಆರೋಪಿಗಳನ್ನೂ ಗುಜರಾತ್ ಹೈಕೋರ್ಟ್ ಖುಲಾಸೆಗೊಳಿಸಿದ್ದಕ್ಕೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಿಜವಾದ ಆರೋಪಿಗಳು ರಾಜಾರೋಷವಾಗಿ ಹೊರಗೆ ಓಡಾಡುತ್ತಿದ್ದರೆ, ಯಾರೋ ಕೆಲವರನ್ನು ಜೈಲಿಗೆ ಅಟ್ಟಲಾಗಿದೆ ಎಂದು ಆರೋಪಿಸಿದ್ದಾರೆ.

ಎಂಟು ವರ್ಷಗಳ ತಾಳ್ಮೆ ಈ ತೀರ್ಪಿನ ನಂತರ ಕಟ್ಟೆಯೊಡೆದಿದೆ. ನಿಜವಾದ ಅಪರಾಧಿಗಳಿಗೆ ಶಿಕ್ಷೆಯಾಗಬೇಕು. ಇದಕ್ಕೆ ಸಹಕರಿಸುವಂತೆ ಬಿಜೆಪಿ ನಾಯಕ ಅಡ್ವಾಣಿ ಹಾಗೂ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದ್ದೇನೆ. ಇನ್ನೂ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಹರೇನ್ ಪಾಂಡ್ಯ, ನರೇಂದ್ರ ಮೋದಿ, ಹತ್ಯೆ, ಸಿಬಿಐ, ಸುಪ್ರೀಂಕೋರ್ಟ್, ಮರುತನಿಖೆ, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ