ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ರೆಡ್ಡಿ ಸಹೋದರರ ಜತೆ ಸುಷ್ಮಾಗೆ ವ್ಯವಹಾರಿಕ ನಂಟು: ದಿಗ್ವಿಜಯ್ ಸಿಂಗ್ (Janardhan Reddy arrest | Sushma Swaraj | M Venkaiah Naidu | Digvijaya Singh | Manmohan Singh | corruption | Reddy Brothers)
ಬಳ್ಳಾರಿ ರೆಡ್ಡಿ ಸಹೋದರರ ಜತೆ ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ವ್ಯವಹಾರಿಕ ಸಂಬಂಧ ಹೊಂದಿದ್ದು, ಈ ನಿಟ್ಟಿನಲ್ಲಿ ತನಿಖೆ ನಡೆಯಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಆಗ್ರಹಿಸಿದ್ದಾರೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ದಿಗ್ವಿಜಯ್ ಸವಾಲನ್ನು ಸ್ವಾಗತಿಸಿರುವ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್, ಈ ಸಂಬಂಧ ಯಾವುದೇ ತನಿಖೆ ಎದುರಿಸಲು ಸಿದ್ಧ. ಬೇಕಿದ್ದರೆ ಸ್ವತ: ಕಾಂಗ್ರಸ್ ಪ್ರಧಾನ ಕಾರ್ಯದರ್ಶಿ ಅವರೇ ತನಿಖೆಗೆ ಮುಂದಾಗಲಿ ಎಂದು ಸವಾಲು ಹಾಕಿದ್ದಾರೆ.

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಭಾರೀ ವಿವಾದದಲ್ಲಿ ಸಿಲುಕಿರುವ ಮಾಜಿ ಪ್ರವಾಸೋದ್ಯಮ ಸಚಿವ ಹಾಗೂ ಬಳ್ಳಾರಿ ಗಣಿ ಧಣಿ ಜನಾರ್ದನ ರೆಡ್ಡಿ ಅವರನ್ನು ಸೋಮವಾರ ಸಿಬಿಐ ಅಧಿಕಾರಿಗಳು ಬಂಧಿಸಿದ್ದರು. ಈ ಸಂಬಂಧ ವಾಗ್ದಾಳಿ ನಡೆಸಿದ್ದ ದಿಗ್ವಿಜಯ್ ಸಿಂಗ್, ರೆಡ್ಡಿ ಸೋದರರ ಜತೆ ಹಿಂದಿನಿಂದಲೇ ವ್ಯವಹಾರಿಕ ನಂಟು ಹೊಂದಿರುವ ಸುಷ್ಮಾ ಸ್ವರಾಜ್ ಮತ್ತು ಎಂ ವೆಂಕಯ್ಯ ನಾಯ್ಡು ವಿರುದ್ಧವೂ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದರು.

ಈ ಎಲ್ಲ ಆಪಾದನೆಗಳನ್ನು ತಳ್ಳಿ ಹಾಕಿರುವ ಸುಷ್ಮಾ ಸ್ವರಾಜ್, ಗಣಿಧಣಿಗಳ ಜತೆ ಯಾವುದೇ ವ್ಯವಹಾರಿಕ ಬಾಂಧವ್ಯ ಹೊಂದಿಲ್ಲ. ಬೇಕಿದದ್ದರೆ ಈ ವಿಷಯದ ಬಗ್ಗೆ ತನಿಖೆ ನಡೆಸಲು ಸ್ವತ: ಪ್ರಧಾನಿ ಮನಮೋಹನ್ ಸಿಂಗ್ ಅವರೇ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನು ನೇಮಕ ಮಾಡಲಿ ಎಂದು ತಿರುಗೇಟು ನೀಡಿದ್ದಾರೆ.

ಖಂಡಿತವಾಗಿಯೂ ಈ ಬಗ್ಗೆ ತನಿಖೆ ಆಗಲಿ. ನನ್ನ ವಿರುದ್ಧ ಸರಕಾರ ಅಥವಾ ಯಾವುದೇ ಸಂಸ್ಥೆಯಿಂದ ತನಿಖೆ ನಡೆಸಬಹುದು. ಸತ್ಯಾಂಶ ಹೊರಬಂದರಷ್ಟೇ ನನಗೆ ನ್ಯಾಯ ದೊರಕಲಿದೆ ಎಂದಿದ್ದಾರೆ.

ವೆಬ್‌ದುನಿಯಾ ಕನ್ನಡ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!
ಇವನ್ನೂ ಓದಿ
ಇದನ್ನು ಸಹ ಶೋಧಿಸು: ದಿಗ್ವಿಜಯ್ ಸಿಂಗ್, ಸುಷ್ಮಾ ಸ್ವರಾಜ್, ವೆಂಕಯ್ಯ ನಾಯ್ಡು, ಜನಾರ್ದನ ರೆಡ್ಡಿ, ಬಿಜೆಪಿ, ಮನಮೋಹನ್ ಸಿಂಗ್, ರೆಡ್ಡಿ ಸೋದರರು, ಬಳ್ಳಾರಿ, ಗಣಿಧಣಿ, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ