ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ಜನಾಂದೋಲನ
ಅಧಿಕಾರಕ್ಕಾಗಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ರಾಜ್ಯದಲ್ಲಿ ನಡೆಸುತ್ತಿರುವ ಜಂಗೀ ಕುಸ್ತಿಯ ಬಗ್ಗೆ ಜನರಿಗೆ ವಿವರಣೆ ನೀಡುವ ಸಂಬಂಧ ಕಾಂಗ್ರೆಸ್ ಇಂದಿನಿಂ ಜನಾಂದೋಲನ ಹಮ್ಮಿಕೊಂಡಿದೆ.

ರಾಜ್ಯದಲ್ಲಿ ಅತಂತ್ರ ರಾಜಕೀಯ ಪರಿಸ್ಥಿತಿಗೆ ಈ ಎರಡೂ ಪಕ್ಷಗಳನ್ನು ಹೊಣೆಯಾಗಿಸಿರುವ ಕಾಂಗ್ರೆಸ್ ಇಂದು ಬೆಂಗಳೂರಿನಲ್ಲಿ ಜನಾಂದೋಲನ ಬೃಹತ್ ಸಮಾವೇಶ ಏರ್ಪಡಿಸಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪೃಥ್ವಿರಾಜ್ ಚೌಹಾಣ್ ಜನಾಂದೋಲನವನ್ನು ಉದ್ಘಾಟಿಸಲಿದ್ದಾರೆ. ಈ ಜನಾಂದೋಲನ ಕಾರ್ಯಕ್ರಮ ರಾಜ್ಯದ ಪ್ರತಿ ಬ್ಲಾಕ್ ಮಟ್ಟದಲ್ಲೂ ನಡೆಯಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಬಿಜೆಪಿ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಖರ್ಗೆ, ಅಧಿಕಾರಕ್ಕಾಗಿ ಬಿಜೆಪಿ ಪಕ್ಷ ಯಾವುದೇ ಕೀಳು ಮಟ್ಟದ ಪ್ರಯತ್ನ ನಡೆಸುವುದಕ್ಕೂ ಹೇಸುವುದಿಲ್ಲ ಎಂದು ತಿಳಿಸಿದ್ದಾರೆ.
ಮತ್ತಷ್ಟು
ಮಧ್ಯಂತರ ಚುನಾವಣೆಯೊಂದೆ ಪರ್ಯಾಯ:ಸಿದ್ಧರಾಮಯ್ಯ
ಬಿಜೆಪಿಗೆ ಬೇಷರತ್ ಬೆಂಬಲ: ಕುಮಾರಸ್ವಾಮಿ
ದೀಪಾವಳಿ ಹಬ್ಬಕ್ಕೆ ಹೆಚ್ಚಿನ ಬಸ್ ಸೌಕರ್ಯ
ಕಾಂಗ್ರೆಸ್ ಮೇಲೆ ಹರಿಹಾಯ್ದ ಗೌಡ
ಒಪ್ಪಂದಕ್ಕೆ ಒಪ್ಪಿಗೆ ಇಲ್ಲದಿದ್ದರೆ ಬೆಂಬಲವಿಲ್ಲ: ಜೆಡಿಎಸ್
ವಿಧಾನಸಭೆ ವಿಸರ್ಜನೆ:ಕೇಂದ್ರಕ್ಕೆ ನಿಯೋಗ