ಅಧಿಕಾರಕ್ಕಾಗಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ರಾಜ್ಯದಲ್ಲಿ ನಡೆಸುತ್ತಿರುವ ಜಂಗೀ ಕುಸ್ತಿಯ ಬಗ್ಗೆ ಜನರಿಗೆ ವಿವರಣೆ ನೀಡುವ ಸಂಬಂಧ ಕಾಂಗ್ರೆಸ್ ಇಂದಿನಿಂ ಜನಾಂದೋಲನ ಹಮ್ಮಿಕೊಂಡಿದೆ.
ರಾಜ್ಯದಲ್ಲಿ ಅತಂತ್ರ ರಾಜಕೀಯ ಪರಿಸ್ಥಿತಿಗೆ ಈ ಎರಡೂ ಪಕ್ಷಗಳನ್ನು ಹೊಣೆಯಾಗಿಸಿರುವ ಕಾಂಗ್ರೆಸ್ ಇಂದು ಬೆಂಗಳೂರಿನಲ್ಲಿ ಜನಾಂದೋಲನ ಬೃಹತ್ ಸಮಾವೇಶ ಏರ್ಪಡಿಸಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪೃಥ್ವಿರಾಜ್ ಚೌಹಾಣ್ ಜನಾಂದೋಲನವನ್ನು ಉದ್ಘಾಟಿಸಲಿದ್ದಾರೆ. ಈ ಜನಾಂದೋಲನ ಕಾರ್ಯಕ್ರಮ ರಾಜ್ಯದ ಪ್ರತಿ ಬ್ಲಾಕ್ ಮಟ್ಟದಲ್ಲೂ ನಡೆಯಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಬಿಜೆಪಿ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಖರ್ಗೆ, ಅಧಿಕಾರಕ್ಕಾಗಿ ಬಿಜೆಪಿ ಪಕ್ಷ ಯಾವುದೇ ಕೀಳು ಮಟ್ಟದ ಪ್ರಯತ್ನ ನಡೆಸುವುದಕ್ಕೂ ಹೇಸುವುದಿಲ್ಲ ಎಂದು ತಿಳಿಸಿದ್ದಾರೆ.
|