ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ಧರಣಿ ಕೈಬಿಟ್ಟ ಬಿಜೆಪಿ, "ಪ್ರಜಾಸತ್ತೆ ಉಳಿಸಿ" ಆಂದೋಲನ
ಬಿಜೆಪಿ ನಿಯೋಗವೊಂದು ಭಾನುವಾರ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರನ್ನು ಭೇಟಿಯಾಗಿ, ಸರಕಾರ ರಚಿಸಲು ಶೀಘ್ರವೇ ಆಹ್ವಾನ ನೀಡುವಂತೆ ಒತ್ತಾಯಿಸಿತು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್, ರಾಜ್ಯಾಧ್ಯಕ್ಷ ಡಿ.ವಿ.ಸದಾನಂದ ಗೌಡ ಮತ್ತು ಮಾಜಿ ಸಚಿವ ಡಾ.ವಿ.ಎಸ್.ಆಚಾರ್ಯ ಅವರನ್ನೊಳಗೊಂಡ ನಿಯೋಗವು ಸುಮಾರು ಒಂದು ಗಂಟೆ ಕಾಲ ರಾಜ್ಯಪಾಲರೊಂದಿಗೆ ಚರ್ಚಿಸಿತು.

ತಾನು ಕೇಂದ್ರಕ್ಕೆ ಶೀಘ್ರವೇ ವರದಿ ಸಲ್ಲಿಸುವುದಾಗಿ ಮತ್ತು ಸಾಂವಿಧಾನಿಕ ವಿಧಿಯನುಸಾರ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲರು ಬಿಜೆಪಿ ನಿಯೋಗಕ್ಕೆ ಭರವಸೆ ನೀಡಿದರು.

ರಾಜ್ಯಪಾಲರಿಂದ ಭರವಸೆ ದೊರೆತ ಹಿನ್ನೆಲೆಯಲ್ಲಿ ಬಿಜೆಪಿಯು ಮಹಾತ್ಮ ಗಾಂಧಿ ಪ್ರತಿಮೆ ಎದುರು ನಡೆಸಲಾಗುತ್ತಿದ್ದ ಪ್ರತಿಭಟನಾ ಧರಣಿಯನ್ನು ಹಿಂತೆಗೆದುಕೊಂಡಿದ್ದು, ಸೋಮವಾರದಿಂದ "ಪ್ರಜಾಪ್ರಭುತ್ವ ಉಳಿಸಿ" ಆಂದೋಲನ ಆರಂಭಿಸಲು ನಿರ್ಧರಿಸಿದೆ.
ಮತ್ತಷ್ಟು
ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ಜನಾಂದೋಲನ
ಮಧ್ಯಂತರ ಚುನಾವಣೆಯೊಂದೆ ಪರ್ಯಾಯ:ಸಿದ್ಧರಾಮಯ್ಯ
ಬಿಜೆಪಿಗೆ ಬೇಷರತ್ ಬೆಂಬಲ: ಕುಮಾರಸ್ವಾಮಿ
ದೀಪಾವಳಿ ಹಬ್ಬಕ್ಕೆ ಹೆಚ್ಚಿನ ಬಸ್ ಸೌಕರ್ಯ
ಕಾಂಗ್ರೆಸ್ ಮೇಲೆ ಹರಿಹಾಯ್ದ ಗೌಡ
ಒಪ್ಪಂದಕ್ಕೆ ಒಪ್ಪಿಗೆ ಇಲ್ಲದಿದ್ದರೆ ಬೆಂಬಲವಿಲ್ಲ: ಜೆಡಿಎಸ್