ಸೋಮವಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಹಿರಿಯ ರಾಜಕಾರಣಿ ಎಂ.ಪಿ. ಪ್ರಕಾಶ್ ಅವರಿಗೆ ಸಚಿವ ಸ್ಥಾನದ ಆಹ್ವಾನ ನೀಡಲಾಗಿದೆ.
ಶನಿವಾರ ಬೆಳಿಗ್ಗೆ ಎಂ.ಪಿ.ಪ್ರಕಾಶ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಯಡ್ಯೂರಪ್ಪ, ಹಿರಿಯರು ಹಾಗೂ ಅನುಭವಿಗಳು ಎಂಬ ಹಿನ್ನೆಲೆಯಲ್ಲಿ ಅವರು ಸಂಪುಟಕ್ಕೆ ಸೇರಬೇಕು ಎಂಬ ಇಚ್ಛೆಯ ಹಿನ್ನೆಲೆಯಲ್ಲಿ ಭೇಟಿ ನಡೆಸಿದ್ದಾಗಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಈ ನಡುವೆ, ದೇವೇಗೌಡರು ತಮ್ಮ ಬಗ್ಗೆ ಇರಿಸಿಕೊಂಡಿರುವ ತಪ್ಪು ಕಲ್ಪನೆ ನಿವಾರಿಸುವ ಹಿನ್ನೆಲೆಯಲ್ಲಿ ಎಂ.ಪಿ. ಪ್ರಕಾಶ್ ದೇವೇಗೌಡರನ್ನು ಭೇಟಿಯಾಗುವ ಸಾಧ್ಯತೆಯಿದೆ.
|