ಬಿಜೆಪಿ ಮತ್ತು ಜೆಡಿ(ಎಸ್) ನಡುವೆ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಹಾಗೂ ರಾಜ್ಯಪಾಲರ ಅಧಿಸೂಚನೆಯ ಕುರಿತಾಗಿ ಕರೆದಿದ್ದ ಜೆಡಿ(ಎಸ್)ನ ತುರ್ತು ಸಭೆ ಇದೀಗ ಮುಕ್ತಾಯವಾಗಿದೆ.
ತಮ್ಮಿಬ್ಬರ ನಡುವೆ ಅಸಮಾಧಾನ ಇರುವುದು ನಿಜ. ಆದರೆ ಮಾತು ಕತೆಗಳ ಎಲ್ಲವನ್ನೂ ಬಗೆ ಹರಿಸಿಕೊಳ್ಳುವ ವಿಶ್ವಾಸ ತಮಗಿದೆ ಎಂದು ಕುಮಾರಸ್ವಾಮಿಯವರು ಜೆಡಿ(ಎಸ್) ಶಾಸಕಾಂಗ ಪಕ್ಷದ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.
ಈ ಹಿನ್ನೆಲೆಯಲ್ಲಿ ತಾವು ಈ ಸಂಜೆ ಯಡಿಯೂರಪ್ಪನವರನ್ನು ಸಹ ಭೇಟಿ ಯಾಗುತ್ತಿರುವುದಾಗಿ ತಿಳಿಸಿದ ಅವರು ನಿಗಮ, ಮಂಡಳಿಗಳ ನೇಮಕಾತಿಯನ್ನು ಸಚಿವ ಸಂಪುಟದ ವಿಸ್ತರಣೆಯ ನಂತರವೇ ಯೋಚಿಸುವುದಾಗಿಯೂ ಸಹ ಹೇಳಿದರು.
ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಹೊಸಬರಿಗೆ ಪ್ರಥಮ ಪ್ರಾಶಸ್ತ್ಯವಿರುತ್ತದೆಂದೂ ಸಹ ತಿಳಿಸಿದ್ದಾರೆ. ತಮ್ಮ ಪಕ್ಷದ ಶಾಸಕರು ಸಚಿವರಾಗಿ ಈ ತಿಂಗಳ 21ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮಾಧ್ಯಮ ವರದಿಗಾರರಿಗೆ ತಿಳಿಸಿದರು.
|