ಸುದ್ದಿ ಜಗತ್ತು
ವ್ಯವಹಾರ
ರಾಜ್ಯ ಸುದ್ದಿ
ರಾಷ್ಟ್ರೀಯ
ಮನರಂಜನೆ
ಸ್ಯಾಂಡಲ್ ವುಡ್
ಬಾಲಿವುಡ್‌
ಇನ್ನಷ್ಟು ಹಾಸ್ಯ...
ಕ್ರೀಡಾ ಜಗತ್ತು
ಕ್ರಿಕೆಟ್ ಟಿಕರ್
ಕ್ರೀಡಾಸುದ್ದಿ
ಕ್ರಿಕೆಟ್‌
ಜ್ಯೋತಿಷ್ಯ
ಜ್ಯೋತಿಷ್ಯಶಾಸ್ತ್ರ
ವಾಸ್ತು
ನಿಮ್ಮ ಜಾತಕ
ಫೋಟೋ ಗ್ಯಾಲರಿ
ಹಾಟ್‌ಶಾಟ್
ಸಿನಿಮಾ
ಬಾಲಿವುಡ್
ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ರಾಮಸ್ವಾಮಿ ವಿರುದ್ಧ ಉಗ್ರಪ್ರತಾಪ: ಪೊಲೀಸರಿಗೆ ದೂರು
ಭೂ ಒತ್ತುವರಿ ಕುರಿತು ಎ.ಟಿ.ರಾಮಸ್ವಾಮಿ ನೇತೃತ್ವದ ಸಮಿತಿ ನೀಡಿದ ವರದಿ ಪಕ್ಷಪಾತದಿಂದ ಕೂಡಿದೆ ಎಂದು ಕಾಂಗ್ರೆಸ್ನ ವಿ.ಎಸ್.ಉಗ್ರಪ್ಪ ನಿನ್ನೆ ಸ್ಪೀಕರ್ ಕಾರ್ಯಾಲಯದಲ್ಲಿ ದಾಂಧಲೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.

ತಮ್ಮ ಮೇಲಿನ ಆಪಾದನೆ ಕುರಿತು ವಿವರಣೆ ನೀಡಿರುವ ಎ.ಟಿ.ರಾಮಸ್ವಾಮಿ, ತಮ್ಮ ವರದಿ ನಿಚ್ಚಳವಾಗಿದೆ ಹಾಗೂ ನಿಷ್ಪಕ್ಷಪಾತದಿಂದ ಕೂಡಿದೆ. ಈ ಆರೋಪ ಸತ್ಯಕ್ಕೆ ದೂರ. ಇದು ನಿಜವೇ ಆಗಿದ್ದರೆ ಸಾಬೀತುಪಡಿಸಲಿ ಎಂದು ಉಗ್ರಪ್ಪನವರಿಗೆ ಸವಾಲು ಹಾಕಿದ್ದಾರೆ.

ವರದಿ ಸಿದ್ಧಪಡಿಸಿದ ನಂತರ ರಾಜ್ಯಪಾಲರಿಗೆ ಸಲ್ಲಿಸಲಾಗಿದೆ. ರಾಜ್ಯಪಾಲರು ಪಟ್ಟಭದ್ರರ ಒತ್ತಡಕ್ಕೆ ಮಣಿಯದೆ ಭೂಕಬಳಿಕೆದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ ಎಂದು ನುಡಿದ ರಾಮಸ್ವಾಮಿ, ಉಗ್ರಪ್ಪನವರು ಸಭಾಧ್ಯಕ್ಷರ ಕಾರ್ಯಾಲಯಕ್ಕೆ ಅಕ್ರಮ ಪ್ರವೇಶ ಮಾಡಿದ್ದಾರೆ. ಮೇಲ್ಮನೆ ಸದಸ್ಯರಿಗೆ ಈ ರೀತಿಯ ವರ್ತನೆ ಶೋಭಿಸುವುದಿಲ್ಲ ಎಂದೂ ಹೇಳಿದ್ದಾರೆ.

ಒಟ್ಟಿನಲ್ಲಿ ರಾಜ್ಯಪಾಲರು ಕೈಗೊಳ್ಳುವ ಕ್ರಮಗಳ ಕಡೆಗೆ ಎಲ್ಲರ ಕುತೂಹಲದ ದೃಷ್ಟಿ ನೆಟ್ಟಿದೆ.
ಮತ್ತಷ್ಟು
ನನಗೆ ಯಾರದೂ ಮುಲಾಜಿಲ್ಲ : ಯಡಿಯೂರಪ್ಪ
ಕನ್ನಡಕ್ಕೆ ದಕ್ಕದ ಸ್ಥಾನಮಾನ : ವಾಟಾಳ್ ಪ್ರತಿಭಟನೆ
ಮರಳಿ ಬನ್ನಿ : ಪ್ರಕಾಶ್‌ಗೆ ಜೆಡಿ(ಯು) ಆಹ್ವಾನ
ರಾಜಕೀಯ ಸಿನಿಮಾ ಅಲ್ಲ: ಎಂ.ಪಿ.ಪ್ರಕಾಶ್
ಸಂಚಾರ ದಟ್ಟಣೆ ಕಡಿವಾಣಕ್ಕೆ ವಿನೂತನ ಕ್ರಮ
ಅಂತಾರಾಷ್ಟ್ತ್ರೀಯ ವಿಮಾನನಿಲ್ದಾಣಕ್ಕೆ ರಸ್ತೆಸೌಲಭ್ಯ
ಮುಖಪುಟ  | ನಮ್ಮ ಕುರಿತು  | ಸಲಹೆಗಳು  | ಜಾಹೀರಾತು ನೀಡಲು  | ಮಿತ್ರನಿಗೆ ಕಳಿಸು  | ಹಕ್ಕು ನಿರಾಕರಣೆ
Copyright © 2009 Webdunia.com