ತಮ್ಮದೇ ನಿಜವಾದ ಜನತಾದಳ. ಇದರ ಬುನಾದಿಯನ್ನು ಭದ್ರಗೊಳಿಸುವುದೇ ತಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಪ್ರಕಾಶ್ ಹಾಗೂ ಅವರ ಬೆಂಬಲಿಗರು ಜೆಡಿಯು ಸೇರಿದರೆ ಸಂತೋಷ ಎಂದು ಜೆಡಿಯು ರಾಜ್ಯ ಘಟಕದ ಅಧ್ಯಕ್ಷ ಬಿ.ಸೋಮಶೇಖರ್ ತಿಳಿಸಿದ್ದಾರೆ.
ಎಂ.ಪಿ.ಪ್ರಕಾಶ್ ಸೇರಿದಂತೆ ಇನ್ನಿತರ ಅತೃಪ್ತ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ. ರಾಷ್ಟ್ತ್ರ ಮಟ್ಟದಲ್ಲಿ ಜೆಡಿಯು ಜೊತೆಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದರೂ ರಾಜ್ಯದಲ್ಲಿ ತನ್ನದೇ ಆದ ನಿರ್ಧಾರವನ್ನು ಕೈಗೊಳ್ಳುವ ಸ್ವಾತಂತ್ರ್ಯ ಜೆಡಿಯುಗೆ ಇದೆ.
ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೇವೋ ಇಲ್ಲವೋ ಎಂದು ಈಗಲೇ ಹೇಳುವುದು ಕಷ್ಟ. ಆದರೆ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಕೈಗೊಳ್ಳುತ್ತೇವೆ ಎಂದೂ ಸೋಮಶೇಖರ್ ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
|