ಸುದ್ದಿ ಜಗತ್ತು
ವ್ಯವಹಾರ
ರಾಜ್ಯ ಸುದ್ದಿ
ರಾಷ್ಟ್ರೀಯ
ಮನರಂಜನೆ
ಸ್ಯಾಂಡಲ್ ವುಡ್
ಬಾಲಿವುಡ್‌
ಇನ್ನಷ್ಟು ಹಾಸ್ಯ...
ಕ್ರೀಡಾ ಜಗತ್ತು
ಕ್ರಿಕೆಟ್ ಟಿಕರ್
ಕ್ರೀಡಾಸುದ್ದಿ
ಕ್ರಿಕೆಟ್‌
ಜ್ಯೋತಿಷ್ಯ
ಜ್ಯೋತಿಷ್ಯಶಾಸ್ತ್ರ
ವಾಸ್ತು
ನಿಮ್ಮ ಜಾತಕ
ಫೋಟೋ ಗ್ಯಾಲರಿ
ಹಾಟ್‌ಶಾಟ್
ಸಿನಿಮಾ
ಬಾಲಿವುಡ್
ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಹಿಂದಿ ಸಾಹಿತ್ಯ ಅಕಾಡೆಮಿ ಸ್ಥಾಪನೆಗೆ ರಾಜ್ಯಪಾಲರ ಒಲವು
ರಾಜ್ಯದಲ್ಲಿ ಹಿಂದಿ ಅಕಾಡೆಮಿ ಸ್ಥಾಪನೆಗೆ ಪ್ರಸ್ತಾವಗಳು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ರಾಜ್ಯಪಾಲ ರಾಮೇಶ್ವರ ಠಾಕೂರ್ ತಿಳಿಸಿದ್ದಾರೆ.

ಕರ್ನಾಟಕ ಮಹಿಳಾ ಹಿಂದಿ ಸೇವಾ ಸಮಿತಿಯ 34ನೇ ಹಿಂದಿ ಘಟಿಕೋತ್ಸವದಲ್ಲಿ ಮಾತನಾಡುತ್ತಿದ್ದ ಅವರು, ರಾಜ್ಯದಲ್ಲಿ ಹಿಂದಿ ಭಾಷೆ ಬೆಳೆಯಬೇಕಿದ್ದರೆ ಕನ್ನಡ ಹಾಗೂ ಹಿಂದಿ ಭಾಷೆಯ ನಡುವೆ ಸಂಪರ್ಕಸೇತುವಾಗಿ ಕಾರ್ಯನಿರ್ವಹಿಸುವ ಅಧಿಕಾರಿಯನ್ನು ನೇಮಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಹಿಂದಿ ಭಾಷೆಯ ಪ್ರಚಾರಕ್ಕಾಗಿ ಸರೋಜಿನಿ ಮಹಿಷಿಯವರು ಕೈಗೊಂಡಿರುವ ಕಾರ್ಯಗಳನ್ನು ಪ್ರಶಂಸಿಸಿದ ರಾಜ್ಯಪಾಲರು, ಕನ್ನಡ ಭಾಷೆಗೆ ಮಾನ್ಯತೆ ನೀಡುವುದರ ಜೊತೆಜೊತೆಗೆ ಹಿಂದಿ ಭಾಷೆಯ ಪ್ರಚಾರವನ್ನೂ ಕೈಗೊಂಡರೆ ಎರಡೂ ಭಾಷೆಗಳ ಸಮನ್ವಯ ಸಾಧಿಸಿದಂತಾಗುತ್ತದೆ ಎಂದು ತಿಳಿಸಿದರು.

ಸಮಿತಿಯ ಅಧ್ಯಕ್ಷೆ ಡಾ| ರಾಧಾ ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಬಿ.ಎಸ್.ಶಾಂತಾದೇವಿಯವರು ಸಭೆಯಲ್ಲಿ ಉಪಸ್ಥಿತರಿದ್ದರು.
ಮತ್ತಷ್ಟು
ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಹೊರಟ್ಟಿ
ಜನ ಮೆಚ್ಚುವ ಕೆಲಸ ಭಗವಂತನಿಗೂ ಇಷ್ಟ: ಪೇಜಾವರ ಶ್ರೀ
ಸಾಹಿತ್ಯ ಸಮ್ಮೇಳನಕ್ಕೆ ಪರ್ಯಾಯವಲ್ಲ: ಜಿ.ರಾಮಕೃಷ್ಣ
ಪ್ರಕಾಶ್ ಮನವೊಲಿಕೆ ಯತ್ನ ವಿಫಲ
ಬಿಎಸ್ಪಿಯತ್ತ ರಾಜಶೇಖರಮೂರ್ತಿ ಚಿತ್ತ
ಮುಖ್ಯಮಂತ್ರಿಯಾದ ಮೇಲೇ ಹುಟ್ಟೂರಿಗೆ: ಯಡ್ಡಿ
ಮುಖಪುಟ  | ನಮ್ಮ ಕುರಿತು  | ಸಲಹೆಗಳು  | ಜಾಹೀರಾತು ನೀಡಲು  | ಮಿತ್ರನಿಗೆ ಕಳಿಸು  | ಹಕ್ಕು ನಿರಾಕರಣೆ
Copyright © 2009 Webdunia.com