ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
3.10 ಲಕ್ಷ ರೂ. ಖೋಟಾ ನೋಟು ವಶ
ಖೋಟಾನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಇಬ್ಬರು ತಮಿಳುನಾಡಿನ ವ್ಯಕ್ತಿಗಳನ್ನು ನಗರದ ಉಪ್ಪಾರಪೇಟೆ ಠಾಣೆಯ ಪೊಲೀಸರು ಬಂಧಿಸಿ, ಸುಮಾರು 3.10 ಲಕ್ಷ ರೂ. ಖೋಟಾನೋಟನ್ನು ವಶಪಡಿಸಿಕೊಂಡಿದ್ದಾರೆ.

ತಮಿಳುನಾಡಿನ ವೆಲ್ಲೂರು ತಾಲೂಕಿನ ಹಲೆ ಅಗ್ರಹಾರಂ ನಿವಾಸಿಗಳಾದ ಮಾಣಿಕ್ಯಂ ಮತ್ತು ಬಾಬು ಎಂಬುವವರನ್ನು ಬಂಧಿಸಲಾಗಿದ್ದು, ಖೋಟಾ ನೋಟುಗಳನ್ನು ಇತರರಿಗೆ ಹಸ್ತಾಂತರ ಮಾಡುವ ಸಲುವಾಗಿ ಕಾಯುತ್ತಿದ್ದಾಗ ಪೊಲೀಸರು ಮಾಹಿತಿ ಪಡೆದು ದಾಳಿ ಮಾಡಿ ಬಂಧಿಸಿದರು ಎಂದು ತಿಳಿದುಬಂದಿದೆ.

ಈ ಬಂಧಿತ ವ್ಯಕ್ತಿಗಳು ಅಗ್ರಹಾರಂನಲ್ಲಿ ಖೋಟಾನೋಟುಗಳನ್ನು ಮುದ್ರಿಸಿ ಚಲಾವಣೆ ಮಾಡುತ್ತಿದ್ದರು. ಅದಕ್ಕಾಗಿ ಉಪಯೋಗಿಸುತ್ತಿದ್ದ ಕಂಪ್ಯೂಟರ್, ಯಂತ್ರ, ಬಣ್ಣದ ಪೇಪರ್ ಹಾಗೂ ಇತರೆ ರಾಸಾಯನಿಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಡಿಸಿಪಿ ಕೆ.ವಿ. ಶರತ್ಶ್ಚಂದ್ರ ಅವರ ಮಾಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ ಎಂದು ಸುದ್ದಿಮೂಲಗಳು ತಿಳಿಸಿವೆ.
ಮತ್ತಷ್ಟು
ಕಾಲೇಜಿಗೆ ಹುಸಿಬಾಂಬ್ ಕರೆ ಸೃಷ್ಟಿಸಿದ ಆತಂಕ
ಪುತ್ತಿಗೆ ಶ್ರೀಗಳ ಕೃಷ್ಣಪೂಜೆಗೆ ಕೋರ್ಟ್ ಅಸ್ತು
ರೈಲ್ವೆ ನೇಮಕಾತಿ ವಿವಾದ: ಮುಂದುವರಿದ ಪ್ರತಿಭಟನೆ
ರೆಡ್ಡಿ ಬಿಜೆಪಿ ಸೇರ್ಪಡೆಗೆ ವಿರೋಧ
ಉನ್ನತ ಶಿಕ್ಷಣಕ್ಕೆ ಸೀಮಿತ ಮಹತ್ವ: ಅನ್ಸಾರಿ ವಿಷಾದ
ನಕ್ಸಲರು, ಕಮ್ಯೂನಿಸ್ಟರು ಪ್ರಗತಿಯ ಶತ್ರುಗಳು: ಶ್ರೀಶ್ರೀ