ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರೈಲು ನಿಲ್ದಾಣಕ್ಕೆ ಹೋರಾಟಗಾರರ ಮುತ್ತಿಗೆ
ರಾಜ್ಯದ ರೈಲ್ವೆ ವಲಯದಲ್ಲಿನ ಖಾಲಿ ಇರುವ ಹುದ್ದೆಗಳಿಗೆ ಬಿಹಾರಿಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದ ಪ್ರಕ್ರಿಯೆಗೆ ಕಡಿವಾಣ ಹಾಕಲು ನಡೆಸಲಾಗುತ್ತಿರುವ ಹೋರಾಟ ನಿರಂತರವಾಗಿ ಸಾಗಿದೆ.

ಬೆಂಗಳೂರಿನ ದಂಡು ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಿದ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಅಲ್ಲಿರುವ ಆಯ್ಕೆ ಮಂಡಳಿ ಕಛೇರಿಯ ಪೀಠೋಪಕರಣಗಳನ್ನು ನಾಶಪಡಿಸಿದರು. ನಂತರ ಕಚೇರಿಗೆ ಬೀಗ ಜಡಿಯಲೆತ್ನಿಸಿದ ಮುನ್ನೂರಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಇದಕ್ಕೂ ಮುನ್ನ ಮಾತನಾಡಿ ಘೋಷಣೆ ಕೂಗಿದ ಕಾರ್ಯಕರ್ತರು ಕನ್ನಡಿಗರಿಗೆ ನ್ಯಾಯ ದೊರೆಯುವವರೆಗೆ ಹೋರಾಟ ಮುಂದುವರಿಸುವುದಾಗಿ ಘೋಷಿಸಿದರು.

ಕನ್ನಡಿಗರಿಗೆ ರೈಲ್ವೆ ಇಲಾಖೆಯಲ್ಲಿ ಅನ್ಯಾಯವಾಗುತ್ತಿದ್ದರೂ ಏನೂ ಕ್ರಮ ತೆಗೆದುಕೊಳ್ಳದ ರಾಜ್ಯ ಸಂಸದರ ನಿಲುವನ್ನು ಖಂಡಿಸಿ ಮಾಜಿ ಶಾಸಕ ಕೆ.ಪ್ರಭಾಕರ ರೆಡ್ಡಿಯವರ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೂರಾರು ಕಾರ್ಯಕರ್ತರು ರೈಲ್ವೆ ಇಲಾಖೆಯವರ ಕನ್ನಡ ವಿರೋಧಿ ನೀತಿಯನ್ನು ಖಂಡಿಸಿದರು.
ಮತ್ತಷ್ಟು
3.10 ಲಕ್ಷ ರೂ. ಖೋಟಾ ನೋಟು ವಶ
ಕಾಲೇಜಿಗೆ ಹುಸಿಬಾಂಬ್ ಕರೆ ಸೃಷ್ಟಿಸಿದ ಆತಂಕ
ಪುತ್ತಿಗೆ ಶ್ರೀಗಳ ಕೃಷ್ಣಪೂಜೆಗೆ ಕೋರ್ಟ್ ಅಸ್ತು
ರೈಲ್ವೆ ನೇಮಕಾತಿ ವಿವಾದ: ಮುಂದುವರಿದ ಪ್ರತಿಭಟನೆ
ರೆಡ್ಡಿ ಬಿಜೆಪಿ ಸೇರ್ಪಡೆಗೆ ವಿರೋಧ
ಉನ್ನತ ಶಿಕ್ಷಣಕ್ಕೆ ಸೀಮಿತ ಮಹತ್ವ: ಅನ್ಸಾರಿ ವಿಷಾದ