ಸುದ್ದಿ ಜಗತ್ತು
ವ್ಯವಹಾರ
ರಾಜ್ಯ ಸುದ್ದಿ
ರಾಷ್ಟ್ರೀಯ
ಮನರಂಜನೆ
ಸ್ಯಾಂಡಲ್ ವುಡ್
ಬಾಲಿವುಡ್‌
ಇನ್ನಷ್ಟು ಹಾಸ್ಯ...
ಕ್ರೀಡಾ ಜಗತ್ತು
ಕ್ರಿಕೆಟ್ ಟಿಕರ್
ಕ್ರೀಡಾಸುದ್ದಿ
ಕ್ರಿಕೆಟ್‌
ಜ್ಯೋತಿಷ್ಯ
ಜ್ಯೋತಿಷ್ಯಶಾಸ್ತ್ರ
ವಾಸ್ತು
ನಿಮ್ಮ ಜಾತಕ
ಫೋಟೋ ಗ್ಯಾಲರಿ
ಹಾಟ್‌ಶಾಟ್
ಸಿನಿಮಾ
ಬಾಲಿವುಡ್
ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಜಟಿಲಗೊಂಡ ಹಳ್ಳಿ ಹಕ್ಕಿಯ ಸಮಸ್ಯೆ
ಮಾಜಿ ಸಚಿವ ಎಚ್. ವಿಶ್ವನಾಥ್‌ರವರ ಹಳ್ಳಿ ಹಕ್ಕಿಯ ಹಾಡು ಕೃತಿಯನ್ನು ನಿಷೇಧಿಸುವಂತೆ ಆಗ್ರಹಿಸಿ ನೂತನ ಸಮಿತಿಯೊಂದು ಅಸ್ತಿತ್ವಕ್ಕೆ ಬಂದಿದೆ. ಮಾಜಿ ಸಂಸದ ಡಿ. ಮಾದೇಗೌಡ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದ ಈ ಹೋರಾಟ ಸಮಿತಿ ಪುಸ್ತಕ ನಿಷೇಧಗೊಳ್ಳುವವರೆಗೂ ಹೋರಾಟವನ್ನು ಕೈ ಬಿಡುವುದಿಲ್ಲ ಎಂದು ಹೇಳಿದೆ. ಇದರಿಂದಾಗಿ ಹಳ್ಳಿ ಹಕ್ಕಿಯ ಹಾಡು ಕೃತಿಯ ಕುರಿತಾದ ಗೊಂದಲ ಮತ್ತಷ್ಟು ಜಟಿಲಗೊಂಡಿದೆ.

ಈ ಕೃತಿಯಿಂದಾಗಿ ಮಹಾರಾಷ್ಟ್ರ ರಾಜ್ಯಪಾಲ ಎಸ್.ಎಂ.ಕೃಷ್ಣ ಹಾಗೂ ನಟಿ ಸರೋಜದೇವಿಯವರ ವರ್ಚಸ್ಸಿಗೆ ಧಕ್ಕೆ ಬಂದಿದೆ ಎಂದು ಸಮಿತಿ ಆರೋಪಿಸಿದ್ದು, ಕೃತಿಯ ವಿರುದ್ಧವಾಗಿ ರಾಜ್ಯಪಾಲರ ಬಳಿಗೆ ನಿಯೋಗವೊಂದನ್ನು ಒಯ್ಯಲು ಅದು ನಿರ್ಧರಿಸಿದೆ.

ಈ ಮೂಲಕ ಮೈಸೂರಿನಲ್ಲಿ ವಿಶ್ವನಾಥ್ ವಿರೋಧಿ ಬಣವೊಂದು ಸ್ವತಃ ಕಾಂಗ್ರೆಸ್ ಪಕ್ಷದಲ್ಲಿಯೇ ರೂಪಗೊಂಡಿದ್ದು, ಕೃತಿಯ ವಿರುದ್ದ ಹಲವು ಕಾಂಗ್ರೆಸ್ ನಾಯಕರೇ ಹೇಳಿಕೆ ನೀಡಿರುವುದು ಕಾಂಗ್ರೆಸ್ ಪಕ್ಷದಲ್ಲಿನ ಭಿನ್ನಾಭಿಪ್ರಾಯವನ್ನು ಬಹಿರಂಗಗೊಳಿಸಿದೆ. ಒಟ್ಟಾರೆಯಾಗಿ ಕಾಂಗ್ರೆಸ್ ಪಕ್ಷದಲ್ಲಿ ಎಚ್. ವಿಶ್ವನಾಥ್‌ರವರ ಸ್ಥಿತಿ ಡೋಲಾಯಮಾನವಾಗಿದೆ.
ಮತ್ತಷ್ಟು
ದೇವೇಗೌಡರ ಹೇಳಿಕೆಗೆ ಪೇಜಾವರ ಶ್ರೀಗಳ ಖಂಡನೆ
'ಹಳ್ಳಿ ಹಕ್ಕಿಯ ಹಾಡು' ವಿರುದ್ಧ ಕಾಂಗ್ರೆಸಿನಲ್ಲೇ ಅಪಸ್ವರ
ರಾಜ್ಯಕ್ಕೆ ಲಷ್ಕರ್ ಲಿಂಕ್: ಮಂಗಳೂರಿನಲ್ಲಿ ತನಿಖೆ
ಕೊಳವೆ ಬಾವಿಯೊಳಗೆ ಬಿದ್ದ ಬಾಲಕನ ರಕ್ಷಣೆ
ಅಂಡರ್ಪಾಸ್ ಎಲ್ಲಾ ಪರೀಕ್ಷೆಯಲ್ಲೂ ಪಾಸ್
ಕೊಳವೆ ಬಾವಿಗೆ ಬಿದ್ದ ಮತ್ತೊಬ್ಬ ಬಾಲಕ
ಮುಖಪುಟ  | ನಮ್ಮ ಕುರಿತು  | ಸಲಹೆಗಳು  | ಜಾಹೀರಾತು ನೀಡಲು  | ಮಿತ್ರನಿಗೆ ಕಳಿಸು  | ಹಕ್ಕು ನಿರಾಕರಣೆ
Copyright © 2009 Webdunia.com