ಸುದ್ದಿ ಜಗತ್ತು
ವ್ಯವಹಾರ
ರಾಜ್ಯ ಸುದ್ದಿ
ರಾಷ್ಟ್ರೀಯ
ಮನರಂಜನೆ
ಸ್ಯಾಂಡಲ್ ವುಡ್
ಬಾಲಿವುಡ್‌
ಇನ್ನಷ್ಟು ಹಾಸ್ಯ...
ಕ್ರೀಡಾ ಜಗತ್ತು
ಕ್ರಿಕೆಟ್ ಟಿಕರ್
ಕ್ರೀಡಾಸುದ್ದಿ
ಕ್ರಿಕೆಟ್‌
ಜ್ಯೋತಿಷ್ಯ
ಜ್ಯೋತಿಷ್ಯಶಾಸ್ತ್ರ
ವಾಸ್ತು
ನಿಮ್ಮ ಜಾತಕ
ಫೋಟೋ ಗ್ಯಾಲರಿ
ಹಾಟ್‌ಶಾಟ್
ಸಿನಿಮಾ
ಬಾಲಿವುಡ್
ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬೈಕ್ ಬಾಂಬ್ ತಯಾರಿ ನಿಪುಣರು ಈ ಶಂಕಿತ ಉಗ್ರರು
ಬೈಕ್ ಕಳವು ಆರೋಪದ ಮೇಲೆ ದಾವಣಗೆರೆಯಲ್ಲಿ ಬಂಧಿತರಾಗಿದ್ದ ಶಂಕಿತ ಉಗ್ರರು 2003ರಲ್ಲಿ ಗುಜರಾತ್ ಮಾಜಿ ಗೃಹಸಚಿವ ಹರೇನ್ ಪಾಂಡ್ಯ ಕೊಲೆಯಲ್ಲಿ ಭಾಗಿಯಾಗಿದ್ದರೆಂಬ ಮಹತ್ವದ ಅಂಶ ವಿಚಾರಣೆ ವೇಳೆಯಲ್ಲಿ ಬೆಳಕಿಗೆ ಬಂದಿದೆ.

ಶಂಕಿತ ಉಗ್ರರಾದ ಮಹಮದ್ ಗೌಸ್ ಅಲಿಯಾಸ್ ರಿಯಾಜುದ್ದೀನ್ ನಾಸಿರ್ ಮತ್ತು ಆತನ ಸಹಚರ ಅಸಾದುಲ್ಲಾ ಇಸ್ಮಾಯಿಲ್ ಅಬೂಬಕರ್ ಬೈಕ್ ಕಳವು ಮಾಡಿ, ಆ ಮೂಲಕ ಬಾಂಬ್ ಸ್ಪೋಟಿಸುವ ಬಗ್ಗೆ ಸಂಚು ನಡೆಸಿದ್ದರೆಂಬ ಆತಂಕಕಾರಿ ಅಂಶಗಳು ಬೆಳಕಿಗೆ ಬಂದಿವೆ.

ಮಹಮದ್ ಗೌಸ್ ಎಂಬಾತ 1996ರಲ್ಲಿಯೇ ಹೈದರಾಬಾದಿನಿಂದ ಪಾಸ್‌ಪೋರ್ಟ್ ಪಡೆದುಕೊಂಡಿದ್ದು, ಪಾಕಿಸ್ತಾನದ ಉಗ್ರಗಾಮಿ ಸಂಘಟನೆಯೊಂದರಲ್ಲಿ ತೊಡಗಿಸಿಕೊಂಡು ಬಾಂಬ್ ತಯಾರಿಕೆಯ ಬಗ್ಗೆ ಮೂರು ತಿಂಗಳ ಕಾಲ ತರಬೇತಿ ಪಡೆದಿದ್ದ ಎನ್ನಲಾಗಿದೆ. ಈತ ಮೆಕ್ಕಾಗೆ ಹೋಗಿದ್ದ ಸಂದರ್ಭದಲ್ಲಿ ಪರಿಚಯವಾದ ಅಸಾದುಲ್ಲಾನೊಡನೆ ಜೊತೆಗೂಡಿ ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಎಂಬ ಆಘಾತಕಾರಿ ಅಂಶಗಳು ವಿಚಾರಣೆ ವೇಳೆ ಹೊರಬಿದ್ದಿವೆ.

ಅಲ್ಲದೆ, ಮಹಮದ್ ಗೌಸ್ ಬೈಕಿನಲ್ಲಿರಿಸಬಹುದಾದ ಸ್ಪೋಟಕಗಳ ತಯಾರಿಕೆಯಲ್ಲಿ ತೊಡಗಿದ್ದ. ಈ ಕಾರಣದಿಂದಾಗಿಯೇ ಇನ್ನೊಬ್ಬ ಉಗ್ರನಾದ ಅಸಾದುಲ್ಲಾನ ಜೊತೆಯಲ್ಲಿ ಬೈಕ್ ಕಳ್ಳತನದ ಸಂದರ್ಭದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ. ಪೊಲೀಸರು ಈ ಬಗ್ಗೆ ತೀವ್ರ ತನಿಖೆ ಆರಂಭಿಸಿದ್ದು, ಬುಧವಾರ ಮಂಪರು ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ.
ಮತ್ತಷ್ಟು
ಜಟಿಲಗೊಂಡ ಹಳ್ಳಿ ಹಕ್ಕಿಯ ಸಮಸ್ಯೆ
ದೇವೇಗೌಡರ ಹೇಳಿಕೆಗೆ ಪೇಜಾವರ ಶ್ರೀಗಳ ಖಂಡನೆ
'ಹಳ್ಳಿ ಹಕ್ಕಿಯ ಹಾಡು' ವಿರುದ್ಧ ಕಾಂಗ್ರೆಸಿನಲ್ಲೇ ಅಪಸ್ವರ
ರಾಜ್ಯಕ್ಕೆ ಲಷ್ಕರ್ ಲಿಂಕ್: ಮಂಗಳೂರಿನಲ್ಲಿ ತನಿಖೆ
ಕೊಳವೆ ಬಾವಿಯೊಳಗೆ ಬಿದ್ದ ಬಾಲಕನ ರಕ್ಷಣೆ
ಅಂಡರ್ಪಾಸ್ ಎಲ್ಲಾ ಪರೀಕ್ಷೆಯಲ್ಲೂ ಪಾಸ್
ಮುಖಪುಟ  | ನಮ್ಮ ಕುರಿತು  | ಸಲಹೆಗಳು  | ಜಾಹೀರಾತು ನೀಡಲು  | ಮಿತ್ರನಿಗೆ ಕಳಿಸು  | ಹಕ್ಕು ನಿರಾಕರಣೆ
Copyright © 2009 Webdunia.com