ಬಹು ನಿರೀಕ್ಷಿತ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೊನೆಗೂ ಕಾಲ ಕೂಡಿ ಬಂದಿದೆ. ನಾಳೆಯಿಂದ ನೂತನ ವಿಮಾನ ನಿಲ್ದಾಣವು ಕಾರ್ಯಾರಂಭ ಮಾಡಲಿದೆ ಎಂದು ಬಿಐಎಎಲ್ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬ್ರೂನರ್ ತಿಳಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿಯನ್ ಏರ್ ಲೈನ್ಸ್ ಮೊದಲ ವಿಮಾನವು ಸಿಂಗಾಪುರಕ್ಕೆ ಹಾರಾಟ ನಡೆಸಲಿದ್ದು, ಮೇ 23ರಂದು ಜೆಟ್ ವಿಮಾನವು ನೂತನ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಚುನಾಯಿತ ಸರ್ಕಾರ ಬಂದ ಬಳಿಕ ಅದ್ದೂರಿ ಉದ್ಘಾಟನಾ ಸಮಾರಂಭ ನಡೆಸಲು ನಿರ್ಧರಿಸಲಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾರಂಭ ವಿಳಂಬವಾದಷ್ಟು ಬಂಡವಾಳ ಹೂಡಿಕೆದಾರರಿಗೆ ತಪ್ಪು ಮಾಹಿತಿ ರವಾನೆಯಾಗುವ ಅಪಾಯ ಎದುರಾಗುವುದನ್ನು ತಪ್ಪಿಸಲು ಸರ್ಕಾರ ಅಸ್ತಿತ್ವಕ್ಕೆ ಬರುವ ಮುನ್ನವೇ ಕಾರ್ಯಾರಂಭಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
|