ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಳ್ಳಭಟ್ಟಿ ದುರಂತಕ್ಕೆ ಕಾಂಗ್ರೆಸ್, ಜೆಡಿಎಸ್ ಕಾರಣ: ಬಿಎಸ್‌ವೈ  Search similar articles
ಬೆಂಗಳೂರು ನಗರ ಹಾಗೂ ರಾಜ್ಯದ ವಿವಿಧೆಡೆ ಸಂಭವಿಸಿದ ಕಳ್ಳಭಟ್ಟಿ ದುರಂತಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ನಡೆಸಿರುವ ಪಿತೂರಿಯೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುಡುಗಿದ್ದಾರೆ.

ಕಳ್ಳಭಟ್ಟಿ ದುರಂತಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿದರೆ ಸತ್ಯ ಏನೆಂಬುದು ಬಹಿರಂಗವಾಗಲಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪ್ರಕರಣದಲ್ಲಿ ಈ ಎರಡು ಪಕ್ಷಗಳು ಕಾರಣವಾಗಿದ್ದರೂ, ವಿನಾ ಕಾರಣ ಬಿಜೆಪಿ ಮೇಲೆ ಆರೋಪ ಮಾಡುತ್ತಿವೆ. ಈ ನಿಟ್ಟಿನಲ್ಲಿ ತನಿಖೆ ನಡೆಯಬೇಕೆಂದು ಅವರು ಆಗ್ರಹಿಸಿದರು.

ಕಡಿಮೆ ಬೆಲೆಗೆ ದೊರೆಯುತ್ತಿದ್ದ ಮದ್ಯದ ದರವನ್ನು ರಾಜ್ಯಪಾಲರ ಆಳ್ವಿಕೆಯಲ್ಲಿ ದಿಢೀರ್ ಹೆಚ್ಚಿಸಲಾಗಿತ್ತು. ಇದುವೇ ಕಳ್ಳಭಟ್ಟಿ ದುರಂತಕ್ಕೆ ಕಾರಣವಾಯಿತು ಎಂದು ಅವರು ಆರೋಪಿಸಿದರು.

ಇದೇ ಸಂದರ್ಭದಲ್ಲಿ ಚುನಾವಣಾ ಪೂರ್ವ ಸಮೀಕ್ಷೆ ಕುರಿತು ಮಾತನಾಡಿದ ಅವರು, ಸಮೀಕ್ಷೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಇದುವರೆಗಿನ ಯಾವ ಸಮೀಕ್ಷೆಗಳು ನಿಜವಾಗಿಲ್ಲ. ಈ ಬಾರಿ ಬಿಜೆಪಿಗೆ ಸೂಕ್ತ ಬಹುಮತ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮತ್ತಷ್ಟು
ಬಿಐಎಲ್‌ಗೆ ಕೆಂಪೇಗೌಡರ ಹೆಸರು: ಕರವೇ ಬೃಹತ್ ಪ್ರತಿಭಟನೆ
ನೂತನ ವಿಮಾನ ನಿಲ್ದಾಣಕ್ಕೆ ಗುರುವಾರ ಚಾಲನೆ
ಕಲಘಟಗಿ ಅತಿಸೂಕ್ಷ್ಮ ಪ್ರದೇಶ : ಪೀಟರ್ ನೇಮಕ
ಕಳ್ಳಭಟ್ಟಿ ದುರಂತಕ್ಕೆ ಮತ್ತೆ 8 ಬಲಿ
ಪೂರ್ವಸಮೀಕ್ಷೆ: ಅತಂತ್ರದಲ್ಲಿ ಬಿಜೆಪಿ ಮೇಲುಗೈ
ಮುಗಿದ ಮೂರನೇ ಹಂತದ ಚುನಾವಣಾ ಪ್ರಚಾರ