ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಜೆಟ್‌ನಲ್ಲಿ ತೆರಿಗೆ ಹೊರೆ ಇಲ್ಲ: ಯಡಿಯೂರಪ್ಪ  Search similar articles
ಮುಂದಿನ ತಿಂಗಳು 17ರಂದು ಮಂಡಿಸಲಿರುವ ಬಜೆಟ್‌ನಲ್ಲಿ ಶ್ರೀಸಾಮಾನ್ಯರ ಮೇಲೆ ತೆರಿಗೆ ಹೊರೆ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಪ್ರಣಾಳಿಕೆಯಲ್ಲಿ ನೀಡಿರುವ ಶೇ.75ರಷ್ಟು ಭರವಸೆಗಳನ್ನು ಮೊದಲ ಬಜೆಟ್‌ನಲ್ಲಿಯೇ ಈಡೇರಿಸಲು ಪ್ರಯತ್ನಿಸಲಾಗುವುದು. ಸರಕಾರದ ಆರ್ಥಿಕ ಇತಿಮಿತಿಯೊಳಗೆ ಬಜೆಟ್‌ಗೆ ಯೋಜನೆಗಳನ್ನು ರೂಪಿಸುವುದಾಗಿ ತಿಳಿಸಿದರು.

ಸರಕಾರ ಐದು ವರ್ಷ ಅವಧಿ ಪೂರ್ಣಗೊಳಿಸಲಿದೆ. ಸರಕಾರದ ಸ್ಥಿರತೆ ಬಗ್ಗೆ ಯಾರಿಗೂ ಅನುಮಾನ ಬೇಡ. ಜನರ ಆಶೀರ್ವಾದದೊಂದಿಗೆ ಐದು ವರ್ಷ ಜನಪರವಾಗಿ ಆಡಳಿತ ನಡೆಸುತ್ತೇವೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಮಧ್ಯೆ ಬಜೆಟ್‌ನಲ್ಲಿ ಆದ್ಯತಾ ವಲಯಗಳ ಕುರಿತು ಚರ್ಚೆ ನಡೆಸಲು ಮಖ್ಯಮಂತ್ರಿ ನೇತೃತ್ವದಲ್ಲಿ ಸೋಮವಾರ ಸಚಿವ ಸಂಪುಟದ ಸಭೆ ನಡೆಸಲಾಗಿದ್ದು, ಮುಖ್ಯಮಂತ್ರಿ ಬಜೆಟ್ ಕುರಿತು ಮಾತುಕತೆ ನಡೆಸಿದ್ದಾರೆ.
ಮತ್ತಷ್ಟು
ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭ
ರಸ್ತೆಗಿಳಿಯಲು ಕಾತರವಾಗಿರುವ 'ಚೀತಾ'ಗಳು
ಮಂಗಳೂರು: ಮಿಫ್ಟ್‌ನಿಂದ ಪತ್ತೆದಾರಿ ಕೋರ್ಸ್
ಬಿಜೆಪಿ ಸೇರ್ಪಡೆ ಊಹಾಪೋಹಕ್ಕೆ ಸಿದ್ದು ತೆರೆ
ರಸಗೊಬ್ಬರ ಒತ್ತಾಯಕ್ಕೆ ಶೀಘ್ರವೆ ನಿಯೋಗ: ಸಿಎಂ
ಪೊಲೀಸರಿಂದ ಮತ್ತೆ ಅತುಲ್ ವಿಚಾರಣೆ