ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಗೋಲಿಬಾರ್‌ಗೆ ಬಿಜೆಪಿ ಕಾರಣ: ಕುಮಾರಸ್ವಾಮಿ  Search similar articles
ಹಾವೇರಿ ಗೋಲಿಬಾರ‌್‌ಗೆ ಬಿಜೆಪಿ ಕಾರ್ಯಕರ್ತರೇ ಪ್ರಮುಖ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ರಸಗೊಬ್ಬರಕ್ಕಾಗಿ ಹಾವೇರಿಯಲ್ಲಿ ನಡೆದ ಗಲಭೆಗೆ ಅಮಾಯಕ ರೈತರು ಕಾರಣರಲ್ಲ. ಬಿಜೆಪಿ ಕಾರ್ಯಕರ್ತರೇ ನೇರ ಹೊಣೆ ಎಂದು ಅವರು ಸದನದಲ್ಲಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಗೊಬ್ಬರ ಕೊರತೆಗಾಗಿ ಹಾವೇರಿಯಲ್ಲಿ ಪ್ರತಿಭಟನೆ ನಡೆದ ದಿನ ಬಿಜೆಪಿ ಕಾರ್ಯಕರ್ತರು ತೈಲ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ಕಾರ್ಯಕರ್ತರೇ ಬೆಂಕಿ ಹಚ್ಚಿ ಗಲಭೆ ನಡೆಸಿದ್ದರು ಎಂದು ಅವರು ಆರೋಪಿಸಿದ್ದಾರೆ.

ಆದರೆ, ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಕ್ರಮ ಕೈಗೊಳ್ಳದ ಪೊಲೀಸರು ರಸಗೊಬ್ಬರ ಸ್ವೀಕರಿಸಲು ಬಂದಿದ್ದ ರೈತರ ಮೇಲೆ ಲಾಠಿ ಪ್ರಹಾರ ನಡೆಸಿ, ಗುಂಡು ಹಾರಿಸಿದ್ದಾರೆ ಎಂದು ಅವರು ಆರೋಪಿಸಿದರು.
ಮತ್ತಷ್ಟು
ಅನನುಭವಿ ಮುಖ್ಯಮಂತ್ರಿ: ದೇವೇಗೌಡ
ಸದನದಲ್ಲಿ ಮೊಳಗಿದ ಗೋಲಿಬಾರ್
ಪದ್ಮಪ್ರಿಯಾ ಪ್ರಕರಣ: ಅತುಲ್ ಬಂಧನ
ಅಜ್ಞಾತ ಸ್ಥಳದಲ್ಲಿ ಡೇರಾ ಸಚ್ಚಾ
ರಸಗೊಬ್ಬರ: ಕೇಂದ್ರ ಮೇಲೆ ಗೂಬೆ ಕೂರಿಸಿದ ಬಿಜೆಪಿ
ಡೇರಾ ಸಚ್ಚಾ ನಗರಕ್ಕೆ ಆಗಮನ