ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ವಿಶೇಷ ಅಧಿವೇಶನಕ್ಕೆ ಕಾಶೆಂಪುರ್ ಆಗ್ರಹ  Search similar articles
ರಾಜ್ಯದೆಲ್ಲೆಡೆ ಉದ್ಭವಿಸಿರುವ ರಸಗೊಬ್ಬರ ಸಮಸ್ಯೆ ಕುರಿತಾದ ಚರ್ಚೆ ಎರಡನೇ ದಿನದ ಅಧಿವೇಶನದಲ್ಲಿ ಮತ್ತೆ ಮುಂದುವರೆದಿದ್ದು, ಆಡಳಿತ ಪಕ್ಷದ ಮೇಲೆ ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸಿವೆ.

ಸರಕಾರರ ನೇರವಾಗಿ ಗೊಬ್ಬರ ಕಂಪೆನಿಗಳ ಜೊತೆ ಸಂಪರ್ಕ ಕಲ್ಪಿಸಬೇಕು. ಅಲ್ಲದೆ, ರೈತರ ವಿಚಾರದಲ್ಲಿ ರಾಜಕೀಯ ಮಾಡದೆ, ಪ್ರತಿಪಕ್ಷಗಳ ಜೊತೆ ಸೇರಿ ಒಗ್ಗಟ್ಟಿನಿಂದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆಂದು ಪ್ರತಿಪಕ್ಷಗಳು ಸರ್ಕಾರಕ್ಕೆ ಮನವಿ ಮಾಡಿವೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ್, ರಾಜ್ಯದಲ್ಲಿ ರೈತರಿಗಾಗಿರುವ ಸಮಸ್ಯೆ ಕುರಿತು ಚರ್ಚಿಸಲು 15 ದಿನಗಳ ವಿಶೇಷ ಅಧಿವೇಶನ ನಡೆಸುವಂತೆ ಸರ್ಕಾರಕ್ಕೆ ಸಲಹೆ ನೀಡಿದರು.

ಬಿತ್ತನೆ ಬೀಜ, ರಸಗೊಬ್ಬರ ಸಮಸ್ಯೆ ಕುರಿತು ಅಧಿವೇಶನದಲ್ಲಿ ಚರ್ಚೆ ನಡೆಸಿ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಕ್ರಮಕೈಗೊಳ್ಳಬೇಕೆಂದು ಅವರು ತಿಳಿಸಿದರು.
ಮತ್ತಷ್ಟು
ಬಿಜೆಪಿಗೆ ಸಿದ್ದು ಅಗತ್ಯವಿಲ್ಲ: ಸದಾನಂದಗೌಡ
ಸದನದಲ್ಲಿ ಮುಗಿಯದ ರಸಗೊಬ್ಬರ ಗಲಾಟೆ
ಗೋಲಿಬಾರ್‌ಗೆ ಬಿಜೆಪಿ ಕಾರಣ: ಕುಮಾರಸ್ವಾಮಿ
ಅನನುಭವಿ ಮುಖ್ಯಮಂತ್ರಿ: ದೇವೇಗೌಡ
ಸದನದಲ್ಲಿ ಮೊಳಗಿದ ಗೋಲಿಬಾರ್
ಪದ್ಮಪ್ರಿಯಾ ಪ್ರಕರಣ: ಅತುಲ್ ಬಂಧನ