ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಸಗೊಬ್ಬರ: ರಾಜ್ಯಪಾಲರಿಗೆ ಸಿಎಂ ಮನವಿ  Search similar articles
ರಸಗೊಬ್ಬರ ಕೊರತೆ ಮತ್ತು ವಿದ್ಯುತ್ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕೇಂದ್ರದ ಮೇಲೆ ಒತ್ತಡ ಹೇರುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಗುರುವಾರದಂದು ರಾಜ್ಯ ಬಜೆಟ್ ಮಂಡನೆ ಮಾಡಲಿರುವ ಯಡಿಯೂರಪ್ಪ, ಇದಕ್ಕೆ ಪೂರ್ವಭಾವಿಯಾಗಿ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಉಂಟಾಗಿರುವ ರಸಗೊಬ್ಬರ ಕೊರತೆಯನ್ನು ತುಂಬಿಕೊಡುವಲ್ಲಿ ಕೇಂದ್ರ ಸರಕಾರ ಆಸಕ್ತಿ ವಹಿಸಬೇಕು, ರಾಜ್ಯದ ವಿದ್ಯುತ್ ಕೊರತೆಗೆ ಕೂಡಲೇ ಸ್ಪಂದಿಸಬೇಕೆಂದು ಭೇಟಿಯ ಸಂದರ್ಭದಲ್ಲಿ ಅವರು ರಾಜ್ಯಪಾಲರಲ್ಲಿ ಮನವಿ ಮಾಡಿಕೊಂಡರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ನಡೆದ ರಾಜಕೀಯ ವಿದ್ಯಮಾನಗಳ ಕುರಿತೂ ರಾಜ್ಯಪಾಲರಿಗೆ ವಿವರಣೆ ನೀಡಿರುವುದಾಗಿ ಯಡಿಯೂರಪ್ಪ ಇದೇ ಸಂದರ್ಭದಲ್ಲಿ ತಿಳಿಸಿದರು.
ಮತ್ತಷ್ಟು
ಗಣಿ ಮಾಫಿಯಾದಿಂದ ರಾಜ್ಯ ಲೂಟಿ: ಗೌಡ
ಜನತಾ ಪರಿವಾರ ತೇಪೆಗೆ ನಾಡಗೌಡ ಪ್ರಯತ್ನ
ಕೆಪಿಸಿಸಿಗೆ ಹೊಸ ಅಧ್ಯಕ್ಷರಾರು?
ಕಸಾಪ: 2 ನಾಮಪತ್ರ ಸಲ್ಲಿಕೆ
ಬಜೆಟ್ ಅಧಿವೇಶನದಲ್ಲಿ 2 ವಿಧೇಯಕಗಳ ಮಂಡನೆ: ಶೆಟ್ಟರ್
ಹಂತಹಂತವಾಗಿ ಪ್ರಣಾಳಿಕೆ ಜಾರಿ: ಯಡಿಯೂರಪ್ಪ