ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಾಷ್ಟ್ರಪತಿ ಆಳ್ವಿಕೆ: ಸಿದ್ದರಾಮಯ್ಯ ಆಗ್ರಹ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಷ್ಟ್ರಪತಿ ಆಳ್ವಿಕೆ: ಸಿದ್ದರಾಮಯ್ಯ ಆಗ್ರಹ
ಬಿಜೆಪಿ ರಾಜ್ಯದಲ್ಲಿ ಅಲ್ಪಸಂಖ್ಯಾತರ ಹಿತ ಕಾಯುವಲ್ಲಿ ವಿಫಲವಾಗಿದ್ದು, ಕೇಂದ್ರ ಸರ್ಕಾರವೇ ಮಧ್ಯ ಪ್ರವೇಶಿಸಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂಬ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆಗ್ರಹಕ್ಕೆ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ದನಿಗೂಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಂತಿಪ್ರಿಯ ನಾಡಿನ ಇತಿಹಾಸಕ್ಕೆ ಬಿಜೆಪಿ ಸರಕಾರ ಮಸಿ ಬಳಿದಿದೆ. ಇದರಿಂದ ರಾಜ್ಯದಲ್ಲಿ ಶಾಂತಿ ಸೌಹಾರ್ದತೆಗೆ ಪೆಟ್ಟು ಬಿದ್ದಿದೆ ಎಂದು ಗಂಭೀರ ಆರೋಪ ಮಾಡಿದರು.

ಗೃಹ ಸಚಿವರು ಸ್ವಂತ ಜಿಲ್ಲೆಯಲ್ಲಿದ್ದಾಗಲೇ ಗಲಭೆ ನಡೆದಿರುವುದು ಸರ್ಕಾರ ಹಾಗೂ ಮುಖ್ಯಮಂತ್ರಿಗಳ ದಕ್ಷತೆಯನ್ನು ತೋರಿಸುತ್ತದೆ ಎಂದು ವ್ಯಂಗ್ಯವಾಡಿದ ಅವರು, ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಅಲ್ಲದೆ, ಈ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು. ಇಲ್ಲವೇ ಸಿಬಿಐಗೆ ಈ ತನಿಖೆಯನ್ನು ವಹಿಸಿ ಆರು ತಿಂಗಳಲ್ಲಿ ವರದಿ ನೀಡುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಮತ್ತಷ್ಟು
ಸ್ಫೋಟ: ಮಣಿಪಾಲ ಲಾಡ್ಜ್‌ನಲ್ಲಿ ತಂಗಿದ್ದ ಉಗ್ರಗಾಮಿ!
ಮಂದಿರದಲ್ಲಿ ಪಾಕ್ ಪರ ಬರವಣಿಗೆ: ಹರಿಹರ ಉದ್ವಿಗ್ನ
ಮಹೇಂದ್ರ ಕುಮಾರ್‌ಗೆ ಜಾಮೀನು
ಮಸೀದಿ-ಮಂದಿರ-ಚರ್ಚ್‌ಗೆ ಬಿಗಿ ಭದ್ರತೆ
ಸಾಂಗ್ಲಿಯಾನ ಬಂಧನಕ್ಕೆ ಬಿಜೆಪಿ ಶಾಸಕರ ಆಗ್ರಹ
ಕಿಡಿಗೇಡಿಗಳ ವಿರುದ್ಧ ಗೂಂಡಾ ಕಾಯ್ದೆ: ಸಿಎಂ