ರಾಜ್ಯದ ವಿವಿಧೆಡೆ ಪ್ರಾರ್ಥನಾ ಮಂದಿರ ಮತ್ತು ಚರ್ಚ್ಗಳ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಗತ್ಯಕ್ಕಿಂತ ಹೆಚ್ಚಾಗಿ ಮಧ್ಯಪ್ರವೇಶಿಸುತ್ತಿದೆ ಎಂದು ಗೃಹ ಸಚಿವ ವಿ.ಎಸ್.ಆಚಾರ್ಯ ಕಿಡಿಕಾರಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆ ವಿಚಾರದಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮಕೈಗೊಂಡಿದ್ದರೂ ಕೂಡ ಕೇಂದ್ರ ಸರ್ಕಾರ ಇಂದು ನಿಯೋಗವೊಂದನ್ನು ಕಳುಹಿಸಿದೆ.
ಕೇಂದ್ರ ಸರ್ಕಾರ ಸಂವಿಧಾನದ ಪರಿಚ್ಛೇಧ 355,356ನ್ನು ಹೇರುತ್ತದೆ ಎಂಬ ಭಯವಿಲ್ಲ, ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತದೆ ಎಂಬ ಭಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾನೂನು ಮತ್ತು ಸಂಸದೀಯ ಇಲಾಖೆ, ಮಾನವ ಹಕ್ಕುಗಳ ಆಯೋಗದ ಜಂಟಿ ನಿರ್ದೇಶಕರ ಮಟ್ಟದ ಮೂವರು ಅಧಿಕಾರಿಗಳ ತಂಡ ಮಂಗಳವಾರ ಮಂಗಳೂರಿಗೆ ಭೇಟಿ ನೀಡಿದೆ.
ಮಂಗಳೂರು, ಉಡುಪಿ ಜಿಲ್ಲೆಗಳಿಗೆ ಭೇಟಿ ನೀಡಿರುವ ಕೇಂದ್ರದ ತಂಡ,ಇಂದು ಸಂಜೆ ರಾಜಧಾನಿಗೆ ಹಿಂತಿರುಗುವ ನಿರೀಕ್ಷೆಯಿದ್ದು, ಅಧಿಕಾರಿಗಳು ಮತ್ತು ನಾವು ತಂಡದೊಂದಿಗೆ ಸಭೆ ಸೇರಿ ಚರ್ಚಿಸಲಾಗುವುದು ಎಂದು ಆಚಾರ್ಯ ಹೇಳಿದರು.
|