ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕಲ್ಗುರ್ಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಲ್ಗುರ್ಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ
ಎರಡೂವರೆ ದಶಕಗಳ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಶುಕ್ರವಾರ ಸಚಿವ ಸಂಪುಟ ಸಭೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಲ್ಲಿನ ವಿಕಾಸಭವನದ ಮೂರನೇ ಮಹಡಿಯಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಐತಿಹಾಸಿಕ ದಿನಕ್ಕಾಗಿ ಗುಲ್ಬರ್ಗಾದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ.

ಈ ಮೊದಲು ಆರ್. ಗುಂಡೂರಾವ್ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಲ್ಬುರ್ಗಿಯಲ್ಲಿ ಸಚಿವ ಸಂಪುಟ ನಡೆಸಲಾಗಿದ್ದನ್ನು ಹೊರತುಪಡಿಸಿದರೆ, ಆ ಬಳಿಕ ಅಂತಹ ಯಾವುದೇ ಸಭೆ ನಡೆದಿರಲಿಲ್ಲ.

ಇದೇ ತಿಂಗಳ 17ರಂದು ಹೈದರಾಬಾದ್- ಕರ್ನಾಟಕ ವಿಮೋಚನಾ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳು ಪಾಲ್ಗೊಂಡ ಸಂದರ್ಭದಲ್ಲಿ ಸಂಪುಟ ಸಭೆ ನಡೆಸುವುದಾಗಿ ಘೋಷಣೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನಾಳೆ ಸಂಪುಟ ಸಭೆ ನಡೆಸಲು ಸರ್ಕಾರ ತೀರ್ಮಾನಿಸಿದೆ.

ಅಲ್ಲದೆ, ತೀರಾ ಹಿಂದುಳಿದ ಪ್ರದೇಶ ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ಹೈದರಾಬಾದ್- ಕರ್ನಾಟಕ ಪ್ರದೇಶವನ್ನು ಕಡೆಗಣಿಸಲಾಗುತ್ತದೆ ಎಂಬ ಕೊರಗು ನಿವಾರಿಸುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ.

ಈ ಸಂದರ್ಭದಲ್ಲಿ ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಗ್ರವಾಗಿ ಚರ್ಚಿಸಿ, ನಿರ್ಣಯಕ್ಕೆ ಬರುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಮತ್ತಷ್ಟು
ದೆಹಲಿ ಸ್ಫೋಟಕ್ಕೆ ಉಡುಪಿಯಿಂದ 10 ಬಾಂಬ್ ‌‌‌!
ಹೆರಾಯಿನ್ ಸಾಗಿಸುತ್ತಿದ್ದ ವಿದ್ಯಾರ್ಥಿನಿ ಬಂಧನ
ದಾಳಿಯಿಂದ ತಲೆ ತಗ್ಗಿಸುವಂತಾಗಿದೆ:ಯಡಿಯೂರಪ್ಪ
ಸೂಕ್ಷ್ಮ ಪ್ರದೇಶ ಭದ್ರತೆಗೆ ಇಂಡಿಯಾ ಮೀಸಲು ಪಡೆ
ಬಿಬಿಎಂಪಿ ಚುನಾವಣೆ: ಹೈಕೋರ್ಟ್‌ಗೆ ರಿಟ್
ಚರ್ಚ್ ದಾಳಿ: ಕಾಂಗ್ರೆಸ್‌ನಿಂದ ರಾಜಭವನ ಚಲೋ