ಮುಂಬರುವ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕುರಿತು ಚರ್ಚಿಸಲು ಅ. 26ರಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಸಚಿವ ಪೃಥ್ವಿರಾಜ್ ಚೌಹಾಣ್ ನಗರಕ್ಕೆ ಆಗಮಿಸಲಿದ್ದಾರೆ.
ಈ ಕುರಿತು ಸ್ಪಷ್ಟನೆ ನೀಡಿದ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ಹಾಗೂ ಕಾಂಗ್ರೆಸ್ ಚುನಾವಣಾ ಮೈತ್ರಿ ವಿಷಯ ಇದುವರೆಗೆ ಅಧಿಕೃತವಾಗಿ ಚರ್ಚೆಯಾಗಿಲ್ಲ ಎಂದು ತಿಳಿಸಿದ್ದಾರೆ.
ಈ ಸಂಬಂಧ ಅಧಿಕೃತವಾಗಿ ಚರ್ಚಿಸಲು ಅ. 26 ಮತ್ತು 27ರಂದು ಪೃಥ್ವಿರಾಜ್ ಚೌಹಾಣ್ ನಗರಕ್ಕೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಮೈತ್ರಿ ಕುರಿತು ಮಾತುಕತೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ವಿಧಾನ ಪರಿಷತ್ನ ಮೂರು ಸ್ಥಾನಗಳ ಚುನಾವಣೆಗೆ ಜೆಡಿಎಸ್ ಪಕ್ಷ ಕಾಂಗ್ರೆಸ್ ಗೆ ಬೆಂಬಲ ಸೂಚಿಸಿರುವುದು ತಮಗೆ ಸಂತಸ ತಂದಿದೆ ಎಂದು ತಿಳಿಸಿದ ಅವರು, ಜೆಡಿಎಸ್ ಮೈತ್ರಿ ಕುರಿತು ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಹೇಳುವ ಮೂಲಕ ತಮ್ಮ ಅಭಿಪ್ರಾಯ ಬಿಚ್ಚಿಡಲಿಲ್ಲ. |