ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಎಸ್‌.ಎಸ್.ಪಾಟೀಲ್ ಬಿಜೆಪಿ ಸೇರ್ಪಡೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಎಸ್‌.ಎಸ್.ಪಾಟೀಲ್ ಬಿಜೆಪಿ ಸೇರ್ಪಡೆ
ಬಿಜೆಪಿಯ ಆಪರೇಷನ್ ಕಮಲ ಮತ್ತೆ ಮುಂದುವರಿದಿದೆ. ಗದಗ ಜಿಲ್ಲೆಯ ಪ್ರಭಾವಿ ಮುಖಂಡ, ಮಾಜಿ ಸಚಿವ ಎಸ್.ಎಸ್.ಪಾಟೀಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಪಾಟೀಲರನ್ನು ಪಕ್ಷಕ್ಕೆ ಸೇರಿಸಿಕೊಂಡ ಮುಖ್ಯಮಂತ್ರಿ ಯಡಿಯೂರಪ್ಪ, ಅನುಭವಿ ಪಾಟೀಲರನ್ನು ಪಕ್ಷ ಗೌರವಯುತವಾಗಿ ನಡೆಸಿಕೊಳ್ಳಲಿದೆ ಎಂದರು. ಕಾಂಗ್ರೆಸ್ ತೊರೆಯಲು ನಿರ್ದಿಷ್ಟ ಕಾರಣವೇನೂ ಇಲ್ಲ.

ಮುಖ್ಯಮಂತ್ರಿಯೊಂದಿಗಿನ ಆತ್ಮೀಯತೆಯಿಂದ ಬಿಜೆಪಿ ಸೇರಿದ್ದೇನೆ, ಉದಾಸಿ ಜೊತೆಗೇ ಬಿಜೆಪಿ ಸೇರಬೇಕಿತ್ತು. ಆದರೆ ವಿಧಾನಸಭೆ ಚುನಾವಣೆ ವೇಳೆ ಆಹ್ವಾನ ಬಂದಿದ್ದರೂ ತೀರ್ಮಾನ ಕೈಗೊಂಡಿರಲಿಲ್ಲ ಎಂದರು.

ಮೂಲತಃ ಜನತಾ ಪರಿವಾರದವರಾದ ಪಾಟೀಲರು ದೇವೇಗೌಡ ಹಾಗೂ ಜೆ.ಎಚ್.ಪಟೇಲ್ ಸಂಪುಟದಲ್ಲಿ ಸಚಿವರಾಗಿದ್ದರು. 2004ರಲ್ಲಿ ಕಾಂಗ್ರೆಸ್ ಸೇರಿ ಮುಂಡರಗಿ ಕ್ಷೇತ್ರದಿಂದ ಪುನರಾಯ್ಕೆಯಾದರು. ಕಳೆದ ಚುನಾವಣೆಯಲ್ಲಿ ಸೋತಿದ್ದರು.

ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌‌ಗೆ ಇದೇ 31 ರಂದು ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಪಾಟೀಲರ ಬಿಜೆಪಿ ಸೇರ್ಪಡೆ ಫಲಿತಾಂಶದ ಮೇಲೆ ಹೆಚ್ಚು ಪರಿಣಾಮ ಬೀರುವ ಸಾಧ್ಯತೆ ಇದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸ್ಪೀಡ್ ಗವರ್ನರ್‌‌ಗೆ ಬ್ರೇಕ್: ಅಶೋಕ್
ಶಿರಾಡಿಘಾಟ್:ಸಿಬಿಐ ತನಿಖೆಗೆ ಹೈ.ಕೋ.ಆದೇಶ
ಶೂಟೌಟ್ ಪ್ರಕರಣ:ಹೃಷಿಕೇಶ್ ಬಂಧನ
ಕೇಂದ್ರದಿಂದ ಸೇಡಿನ ರಾಜಕಾರಣ:ಯಡಿಯೂರಪ್ಪ
ಮೈಸೂರು ಗೊಮ್ಮಟನಿಗೆ ಮಸ್ತಕಾಭಿಷೇಕ
ದತ್ತ ಅಭಿಯಾನಕ್ಕೆ ಶಾಂತಿಯುತ ತೆರೆ