ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಶಂಕಿತ ನಕ್ಸಲೀಯರ ಬಂಧನ ?
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಶಂಕಿತ ನಕ್ಸಲೀಯರ ಬಂಧನ ?
ಸಕಲೇಶಪುರ ತಾಲೂಕಿನ ಮಲೆನಾಡಿನ ರಹಸ್ಯ ಸ್ಥಳದಲ್ಲಿದ್ದ ಕಾರ್ಯಾಚರಿಸುತ್ತಿದ್ದ ಶಂಕಿತ ನಕ್ಸಲೀಯರ ಅಡಗುತಾಣಗಳ ಮೇಲೆ ದಾಳಿ ನಡೆಸಿದ ನಕ್ಸಲ್ ನಿಗ್ರಹದಳ ಕೆಲವರನ್ನು ವಶಕ್ಕೆ ತೆಗೆದುಕೊಂಡಿದೆ.

ಬಂಧನಕ್ಕೆ ಒಳಗಾಗಿರುವ ಶಂಕಿತ ನಕ್ಸಲೀಯರ ವಿಚಾರಣೆ ನಡೆಸುತ್ತಿದ್ದು, ಎರಡು ದಿನಗಳ ಹಿಂದೆಯೇ ಶಂಕಿತ ನಕ್ಸಲೀಯರನ್ನು ನಕ್ಸಲ್ ನಿಗ್ರಹ ಪಡೆಯ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ನಕ್ಸಲ್ ನಿಗ್ರಹಪಡೆಯ ಐವರ ತಂಡ ಗ್ರಾಮಕ್ಕೆ ಭೇಟಿ ನೀಡಿ, ಮನೆಯೊಂದರಲ್ಲಿ ಆಶ್ರಯ ಪಡೆದ ಶಂಕಿತ ನಕ್ಸಲೀಯರ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಲಾಗಿದೆ. ಆದರೆ ಮತ್ತೊಂದು ವರದಿ ಪ್ರಕಾರ, ಮಲೆನಾಡಿನ ಹಳ್ಳಿಯಲ್ಲಿ ವಾಸವಾಗಿದ್ದ ಯುವಕರು ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು.

ಇದುವರೆಗೆ ಊರಲ್ಲಿ ಇಲ್ಲದಿರುವುದನ್ನೇ ನೆಪ ಮಾಡಿಕೊಂಡು ಕೆಲವರು ಪೊಲೀಸರಿಗೆ ತಪ್ಪು ಮಾಹಿತಿ ನೀಡಿದ್ದು, ಈ ಆಧಾರದ ಮೇಲೆ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ನವೆಂಬರ್‌ನಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ
ಬಿಜೆಪಿಯೊಂದಿಗೆ ಚುನಾವಣಾ ಆಯೋಗ ಶಾಮೀಲು:ಡಿಕೆಶಿ
ಹೂವಿನಹಡಗಲಿ ಬಂದ್ ಯಶಸ್ವಿ
ಸಂಸತ್ ಸ್ಥಾನಕ್ಕೆ ಮನೋರಮಾ ರಾಜೀನಾಮೆ
ಎಸ್‌.ಎಸ್.ಪಾಟೀಲ್ ಬಿಜೆಪಿ ಸೇರ್ಪಡೆ
ಸ್ಪೀಡ್ ಗವರ್ನರ್‌‌ಗೆ ಬ್ರೇಕ್: ಅಶೋಕ್