ಮೌಲ್ಯ ವರ್ದಿತ ತೆರಿಗೆ ವಂಚಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಎಚ್ಚರಿಸಿದ್ದಾರೆ.
ರಾಜರಾಜೇಶ್ವರಿನಗರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ನಾಗರಬಾವಿಯಲ್ಲಿ ನಿರ್ಮಿಸಲಾಗಿರುವ ತೆರಿಗೆ ಭವನ ಉದ್ಘಾಟಿಸಿ ಅವರು ಮಾತನಾಡಿದರು.
ಕೆಲವು ವ್ಯಾಪಾರಸ್ಥರು ಹಾಗೂ ಕೈಗಾರಿಕೋದ್ಯಮಿಗಳು ಮೌಲ್ಯವರ್ದಿತ ತೆರಿಗೆಯನ್ನು ಸರಿಯಾಗಿ ಪಾವತಿ ಮಾಡದಿರುವ ಬಗ್ಗೆ ಸರ್ಕಾರದ ಗಮನಕ್ಕೆ ಬಂದಿದೆ.
20080-09ನೆ ಸಾಲಿನಲ್ಲಿ 20ಸಾವಿರ ಕೋಟಿ ರೂ.ತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದ್ದು, ಕಳೆದ ವರ್ಷ 17ಸಾವಿರ ಕೋಟಿ ರೂ.ತೆರಿಗೆ ಸಂಗ್ರಹಿಸಲಾಗಿದೆ ಎಂದರು.
ತೆರಿಗೆ ಸಂಗ್ರಹ ರಾಜ್ಯದ ಅಭಿವೃದ್ಧಿಗೆ ಮೂಲ ಆಧಾರವಾಗಿರುವುದರಿಂದ ಅಧಿಕಾರಿಗಳು ಪ್ರಾಮಾಣಿಕವಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕೆಂದು ಯಡಿಯೂರಪ್ಪ ಸೂಚಿಸಿದರು.
ತೆರಿಗೆ ಸಂಗ್ರಹಿಸುವ ಕುರಿತಾಗಿ ಈಗಾಗಲೇ ಜಾಗೃತ ತಂಡವನ್ನು ರಚಿಸಲಾಗಿದೆ ಎಂದ ಅವರು, ಅಧಿಕಾರಿಗಳು ಯಾವುದೇ ಕಾರಣಕ್ಕೂ ವ್ಯಾಪಾರಸ್ಥರಿಗೆ ಕಿರುಕುಳ ನೀಡಬಾರದು ಎಂದು ಮನವಿ ಮಾಡಿಕೊಂಡರು. |