ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಗೌಡರ ಹೇಳಿಕೆ-ಪ್ರತಿಕ್ರಿಯೆಗೆ ಖರ್ಗೆ ನಕಾರ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಗೌಡರ ಹೇಳಿಕೆ-ಪ್ರತಿಕ್ರಿಯೆಗೆ ಖರ್ಗೆ ನಕಾರ
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಕುರಿತು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಲು ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನಿರಾಕರಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರು ಈ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ದೇವೇಗೌಡರು ರಾಷ್ಟ್ರಮಟ್ಟದ ನಾಯಕರು. ಅಂತಹವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮೈತ್ರಿ ಕುರಿತು ಕಾಂಗ್ರೆಸ್‌‌‌‌ನಲ್ಲಿ ವ್ಯಕ್ತಿಗತ ನಿರ್ಧಾರ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಈ ಕುರಿತು ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ರಾಜ್ಯ ನಾಯಕರು ಬದ್ಧರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕುರಿತು ವಿವಾದಗಳು ಹುಟ್ಟಿಕೊಂಡ ಬೆನ್ನಲ್ಲೆ ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡರು, ರಾಜ್ಯದ 8 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಶುಕ್ರವಾರದಂದು ಸ್ಪಷ್ಟಪಡಿಸಿದ್ದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ವಿಜ್ಞಾನಿಗಳಿಗೆ ಯಡಿಯೂರಪ್ಪ ಅಭಿನಂದನೆ
ಬಿಜೆಪಿಯಿಂದ ಮಠಗಳ ದುರುಪಯೋಗ: ಖರ್ಗೆ ಆರೋಪ
ತಾರತಮ್ಯ: ಪ್ರಧಾನಿಗೆ ಯಡಿಯೂರಪ್ಪ ಪತ್ರ
ದಿವಾಕರ್ ಬಾಬುಗೆ ಷರತ್ತು ಬದ್ಧ ಜಾಮೀನು
8 ಸಾವಿರ ಶಿಕ್ಷಕರ ನೇಮಕ: ಕಾಗೇರಿ
ಕಾಂಗ್ರೆಸ್ ಏಕಾಂಗಿ ಹೋರಾಟ ನಡೆಸಲಿ: ದೇವೇಗೌಡ