ನಗರದ ಹೂಡಿ ಸಮೀಪ ಕುಸಿದು ಬಿದ್ದ ಶಾಂತಿನಿಕೇತನ ಕಟ್ಟಡ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು ವಿಚಾರಣೆಗೆ ಗುರಿಪಡಿಸಿದ್ದಾರೆ.
ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿ ಕಟ್ಟಡ ನಿರ್ಮಿಸಲಾಗುತ್ತಿತ್ತು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇದೀಗ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದೆ.
ಕಟ್ಟಡ ಕುಸಿದು ಎರಡು ದಿನಗಳ ನಂತರ ಪಾಲಿಕೆ ಈ ಕ್ರಮ ಕೈಗೊಂಡಿದ್ದು, ಈ ಸಂಬಂಧ ತನಿಖೆ ನಡೆಸಲು ಕೋರಿದೆ.
ತನಿಖೆಗೆ ಆದೇಶ:ಪ್ರಿಸ್ಟೇಜ್ ಸಂಸ್ಥೆ ಗುತ್ತಿಗೆ ಪಡೆದಿರುವ ಶಾಂತಿನಿಕೇತನ ಕಟ್ಟಡ ಗುರುವಾರ ಕುಸಿದು ಬಿದ್ದಿತ್ತು. ಈ ಸಂಬಂಧ ಮಹಾನಗರ ಪಾಲಿಕೆ ಮತ್ತು ಅಗ್ನಿಶಾಮಕ ಸಿಬ್ಬಂದಿ ಸಮಗ್ರ ವರದಿ ನೀಡುವಂತೆ ನಗರ ಪೊಲೀಸ್ ಆಯುಕ್ತ ಶಂಕರ್ ಬಿದರಿ ಆದೇಶ ನೀಡಿದ್ದಾರೆ.
ಈ ಸಂಬಂಧ ಯೋಜನೆ ಕೈಗೆತ್ತಿಕೊಂಡಿದ್ದ ಸಂಸ್ಥೆಯ ಸಿಬ್ಬಂದಿ ಇಬ್ಬರನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ. |