ಮಂಗಳೂರಿನ ಬೇಗ್ ಗ್ರಾಮವೊಂದರಲ್ಲಿ ಇಂದು ಮುಂಜಾನೆ ರಾಜ್ಯ ನಿಯಂತ್ರಿತ ಬಸ್ಸೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿಹೊಡೆದ ಪರಿಣಾಮವಾಗಿ ಐದು ಮಂದಿ ಮೃತಪಟ್ಟಿದ್ದು, ಸುಮಾರು 27 ಮಂದಿ ಗಾಯಗೊಂಡಿದ್ದಾರೆ.
ಅಪಘಾತಕ್ಕೊಳಗಾಗಿದ್ದ ಬಸ್ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕನ ನಿರ್ಲ್ಯಕ್ಷವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಗಾಯಾಳುಗಳನ್ನು ಹಾಸನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |